ಪ್ರಕೃತಿ ವಿಕೋಪ: ಭಾರತದಲ್ಲಿ ಕಳೆದ ವರ್ಷ 5 ದಶಲಕ್ಷ ಮಂದಿ ಸ್ಥಳಾಂತರ: ವಿಶ್ವಸಂಸ್ಥೆ
ನವದೆಹಲಿ, ಮೇ 23,ಅಂಫಾನ್ ಚಂಡಮಾರುತದಿಂದಾಗಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಸಂಖ್ಯೆಯ ಜನರ ಸ್ಥಳಾಂತರವಾಗಿದೆ. ಈ ವರದಿಗಳ ಮಧ್ಯೆ, ನೈಸರ್ಗಿಕ ವಿಪತ್ತುಗಳು, ಸಂಘರ್ಷ ಮತ್ತು ಹಿಂಸಾಚಾರದಿಂದಾಗಿ 2019 ರಲ್ಲಿ ಭಾರತದಲ್ಲಿ 5 ದಶಲಕ್ಷಕ್ಕೂ ಹೆಚ್ಚು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ. ಈ ಅಂಕಿ ಅಂಶವು ವಿಶ್ವದಲ್ಲೇ ಅತಿ ಹೆಚ್ಚು ಆಂತರಿಕ ಸ್ಥಳಾಂತರಗಳನ್ನು ಹೊಂದಿದೆ. ಭಾರತದ ನಂತರ ಫಿಲಿಪೈನ್ಸ್, ಬಾಂಗ್ಲಾದೇಶ ಮತ್ತು ಚೀನಾ ದೇಶಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ.ಯುಎನ್ ಚಿಲ್ಡ್ರನ್ಸ್ ಫಂಡ್ –ಯುನಿಸೆಫ್ ನ ವರದಿ 'ಲಾಸ್ಟ್ ಅಟ್ ಹೋಮ್' 2019 ರಲ್ಲಿ ಸುಮಾರು 33 ಮಿಲಿಯನ್ ಹೊಸ ಸ್ಥಳಾಂತರಗಳನ್ನು ವಿಶ್ವದಾದ್ಯಂತ ದಾಖಲಿಸಲಾಗಿದೆ ಎಂದು ಹೇಳಿದೆ. ಈ ಪೈಕಿ ಸುಮಾರು 25 ದಶಲಕ್ಷ ಜನರು ನೈಸರ್ಗಿಕ ವಿಪತ್ತಿನಿಂದ, 8.5 ದಶಲಕ್ಷ ಮಂದಿ ಸಂಘರ್ಷ ಮತ್ತು ಹಿಂಸಾಚಾರದ ಪರಿಣಾಮದಿಂದಾಗಿ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 