ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಶಾಸಕ ವಿಶ್ವಾಸ ವೈದ್ಯ
Necessary preparations to celebrate Rajyotsava grandly: MLA Vishwas Vaidya
ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಶಾಸಕ ವಿಶ್ವಾಸ ವೈದ್ಯ
ಸವದತ್ತಿ 18: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಪ್ರತಿವರ್ಷದಂತೆ ಕನ್ನಡಾಂಬೆ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಜಾನಪದ ಕಲಾತಂಡ ಮತ್ತು ಆಶಾ ಅಂಗನವಾಡಿ ಕಾರ್ಯಕರ್ತೆಯರ ಪೂರ್ಣಕುಂಭ ಕಳಸದೊಂದಿಗೆ ಅದ್ದೂರಿ ಮೆರವಣಿಗೆ ಮಾಡಬೇಕು ಎಂದು ತಿಳಿಸಿದರು.ಸರ್ಕಾರಿ ಕಚೇರಿ ಮತ್ತು ಮೆರವಣಿಗೆ ಸಾಗುವ ರಸ್ತೆಯಲ್ಲಿ ವಾಣಿಜ್ಯ ಮಳಿಗೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಕ್ರಮ ಕೈಗೊಳ್ಳಬೇಕು. ಮೆರವಣಿಗೆಯಲ್ಲಿ ಸಾಗುವ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವಂತೆ ನಗರಸಭೆ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳಿದರು.ಈ ವೇಳೆ ತಹಶೀಲ್ದಾರ ಮಲ್ಲಿಕಾರ್ಜುನ ಹೆಗನ್ನವರ, ಪ್ರಬಾರಿ ಇಓ ಬಸವರಾಜ ಅಯ್ಯನಗೌಡ್ರ, ಉಪ ತಹಶೀಲ್ದಾರ ಎಮ್ ಎನ್. ಮಠದ, ಬಿಇಓ ಎ. ಎ. ಖಾಜಿ, ಕಸಾಪ ಅಧ್ಯಕ್ಷ ಡಾ. ವಾಯ್. ಎಂ. ಯ್ಯಾಕೋಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 