ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಶಾಸಕ ವಿಶ್ವಾಸ ವೈದ್ಯ

ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಶಾಸಕ ವಿಶ್ವಾಸ ವೈದ್ಯ Necessary preparations to celebrate Rajyotsava grandly: MLA Vishwas Vaidya

ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಶಾಸಕ ವಿಶ್ವಾಸ ವೈದ್ಯ

ಸವದತ್ತಿ 18:  ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಪ್ರತಿವರ್ಷದಂತೆ ಕನ್ನಡಾಂಬೆ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಜಾನಪದ ಕಲಾತಂಡ ಮತ್ತು ಆಶಾ ಅಂಗನವಾಡಿ ಕಾರ್ಯಕರ್ತೆಯರ ಪೂರ್ಣಕುಂಭ ಕಳಸದೊಂದಿಗೆ ಅದ್ದೂರಿ ಮೆರವಣಿಗೆ ಮಾಡಬೇಕು ಎಂದು ತಿಳಿಸಿದರು.ಸರ್ಕಾರಿ ಕಚೇರಿ ಮತ್ತು ಮೆರವಣಿಗೆ ಸಾಗುವ ರಸ್ತೆಯಲ್ಲಿ ವಾಣಿಜ್ಯ ಮಳಿಗೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಕ್ರಮ ಕೈಗೊಳ್ಳಬೇಕು. ಮೆರವಣಿಗೆಯಲ್ಲಿ ಸಾಗುವ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವಂತೆ ನಗರಸಭೆ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳಿದರು.ಈ ವೇಳೆ ತಹಶೀಲ್ದಾರ ಮಲ್ಲಿಕಾರ್ಜುನ ಹೆಗನ್ನವರ, ಪ್ರಬಾರಿ ಇಓ ಬಸವರಾಜ ಅಯ್ಯನಗೌಡ್ರ, ಉಪ ತಹಶೀಲ್ದಾರ ಎಮ್ ಎನ್‌. ಮಠದ, ಬಿಇಓ ಎ. ಎ. ಖಾಜಿ, ಕಸಾಪ ಅಧ್ಯಕ್ಷ ಡಾ. ವಾಯ್‌. ಎಂ. ಯ್ಯಾಕೋಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇದ್ದರು.