ಸಿಎಎಯಿಂದ ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮ: ಮಾಯಾವತಿ
ಲಕ್ನೋ, ಡಿ 17: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಹಿಂದೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿರುವ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಮಾಯಾವತಿ, ಮಂಗಳವಾರ ಈ ಅಸಂವಿಧಾನಿಕ ಕಾನೂನು ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದಾರೆ.ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, "ಈ ಅಸಂವಿಧಾನಿಕ ಕಾನೂನನ್ನು ಹಿಂದೆಗೆದುಕೊಳ್ಳುವಂತೆ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ, ಇಲ್ಲದಿದ್ದರೆ ಅದು ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮಗಳನ್ನು ಬೀರಬಹುದು. ಕೇಂದ್ರ ಸರ್ಕಾರವು, ತುತರ್ು ಪರಿಸ್ಥಿತಿಯಂತಹ ವಾತಾರವಣ ಸೃಷ್ಟಿಸಬಾರದು, ಕಾಂಗ್ರೆಸ್ ಈ ಹಿಂದೆ ಇದನ್ನೇ ಮಾಡಿತ್ತು ಎಂದು ಹೇಳಿದ್ದಾರೆ.ಸಿಎಎ ಬಗ್ಗೆ ದೂರು ನೀಡಲು ರಾಷ್ಟ್ರಪತಿಯವರ ಭೇಟಿಗೆ ಸಮಯವನ್ನು ಬಿಎಸ್ಪಿ ಸಂಸದೀಯ ಸಮಿತಿ ಕೋರಿದೆ ಎಂದು ಮಾಹಿತಿ ನೀಡಿದರು.ಸಿಎಎ ವಿರುದ್ಧ ಮತ್ತು ಯುಪಿ ಅಸೆಂಬ್ಲಿಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆಯೂ ಬಿಎಸ್ಪಿ ಧ್ವನಿ ಎತ್ತಲಿದೆ ಎಂದು ಅವರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 