ಕಾವೇರಿ ನದಿ ಶುದ್ದೀಕರಣ, ಪುನಶ್ಚೇತನ ಕುರಿತ ನಿರ್ಲಕ್ಷ್ಯ: ಹೈಕೋರ್ಟ್ ಅಸಮಾಧಾನ
high court
ಬೆಂಗಳೂರು, ಜ 31-ಕಾವೇರಿ ನದಿ ಶುದ್ದೀಕರಣ ಮತ್ತು ಪುನಶ್ಚೇನ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆ ರಾಜ್ಯ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ನದಿ ಪುನಶ್ಚೇತನ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಅಧಿಕಾರಿಗಳ ಪಟ್ಟಿ ನೀಡುವಂತೆಯೂ ಸೂಚಿಸಿದೆ.
ಮಡಿಕೇರಿಯಿಂದ ತಲಕಾವೇರಿ, ನಾಪೋಕ್ಲುವಿನಿಂದ ಭಾಗಮಂಡಲ ನಡುವೆ ಮೇಲ್ಸೇತುವೆ ನಿರ್ಮಾಣ ಯೋಜನೆ ವಿರೋಧಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ಉದಾಸೀನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಕಳೆದ ಜನವರಿ ೬ರಂದು ಕಾವೇರಿ ನದಿ ಕಲುಷಿತವಾಗುತ್ತಿದ್ದು, ಕಾವೇರಿ ನದಿಯಲ್ಲಿ ಕೊಳಚೆ ನೀರು ಸೇರ್ಡೆಯಾಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಆಗ ನ್ಯಾಯಪೀಠ, ಕಾವೇರಿ ನೀರು ಶುದ್ಧೀಕರಣ ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಸಲ್ಲಿಸುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಸೂಚನೆ ನೀಡಿತ್ತು.
ಈ ಕಾರ್ಯಯೋಜನೆಯಲ್ಲಿ ಹಲವು ಇಲಾಖೆಗಳ ಅಭಿಯಂತರರು ಕೆಲಸ ಮಾಡುತ್ತಿದ್ದಾರೆ ಎಂದು ನಿಗಮ ವಾದಿಸಿತ್ತು. ಹಾಗಾದರೆ ಸರ್ಕಾರ ನದಿ ಶುದ್ದೀಕರಣ ವಿಚಾರದಲ್ಲಿ ಯಾವ ಕ್ರಮ ಕೈಗೊಂಡಿದೆ ಎಂದು ಸಮಗ್ರ ಮಾಹಿತಿ ಕೊಡಿ ಎಂದು ಆದೇಶಿಸಿತ್ತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 