ಕಾವೇರಿ ನದಿ ಶುದ್ದೀಕರಣ, ಪುನಶ್ಚೇತನ ಕುರಿತ ನಿರ್ಲಕ್ಷ್ಯ: ಹೈಕೋರ್ಟ್ ಅಸಮಾಧಾನ
high court
ಬೆಂಗಳೂರು, ಜ 31-ಕಾವೇರಿ ನದಿ ಶುದ್ದೀಕರಣ ಮತ್ತು ಪುನಶ್ಚೇನ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆ ರಾಜ್ಯ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ನದಿ ಪುನಶ್ಚೇತನ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಅಧಿಕಾರಿಗಳ ಪಟ್ಟಿ ನೀಡುವಂತೆಯೂ ಸೂಚಿಸಿದೆ.
ಮಡಿಕೇರಿಯಿಂದ ತಲಕಾವೇರಿ, ನಾಪೋಕ್ಲುವಿನಿಂದ ಭಾಗಮಂಡಲ ನಡುವೆ ಮೇಲ್ಸೇತುವೆ ನಿರ್ಮಾಣ ಯೋಜನೆ ವಿರೋಧಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ಉದಾಸೀನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಕಳೆದ ಜನವರಿ ೬ರಂದು ಕಾವೇರಿ ನದಿ ಕಲುಷಿತವಾಗುತ್ತಿದ್ದು, ಕಾವೇರಿ ನದಿಯಲ್ಲಿ ಕೊಳಚೆ ನೀರು ಸೇರ್ಡೆಯಾಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಆಗ ನ್ಯಾಯಪೀಠ, ಕಾವೇರಿ ನೀರು ಶುದ್ಧೀಕರಣ ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಸಲ್ಲಿಸುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಸೂಚನೆ ನೀಡಿತ್ತು.
ಈ ಕಾರ್ಯಯೋಜನೆಯಲ್ಲಿ ಹಲವು ಇಲಾಖೆಗಳ ಅಭಿಯಂತರರು ಕೆಲಸ ಮಾಡುತ್ತಿದ್ದಾರೆ ಎಂದು ನಿಗಮ ವಾದಿಸಿತ್ತು. ಹಾಗಾದರೆ ಸರ್ಕಾರ ನದಿ ಶುದ್ದೀಕರಣ ವಿಚಾರದಲ್ಲಿ ಯಾವ ಕ್ರಮ ಕೈಗೊಂಡಿದೆ ಎಂದು ಸಮಗ್ರ ಮಾಹಿತಿ ಕೊಡಿ ಎಂದು ಆದೇಶಿಸಿತ್ತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 