ಕಾವೇರಿ ನದಿ ಶುದ್ದೀಕರಣ, ಪುನಶ್ಚೇತನ ಕುರಿತ ನಿರ್ಲಕ್ಷ್ಯ: ಹೈಕೋರ್ಟ್ ಅಸಮಾಧಾನ
high court
ಬೆಂಗಳೂರು, ಜ 31-ಕಾವೇರಿ ನದಿ ಶುದ್ದೀಕರಣ ಮತ್ತು ಪುನಶ್ಚೇನ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆ ರಾಜ್ಯ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ನದಿ ಪುನಶ್ಚೇತನ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಅಧಿಕಾರಿಗಳ ಪಟ್ಟಿ ನೀಡುವಂತೆಯೂ ಸೂಚಿಸಿದೆ.
ಮಡಿಕೇರಿಯಿಂದ ತಲಕಾವೇರಿ, ನಾಪೋಕ್ಲುವಿನಿಂದ ಭಾಗಮಂಡಲ ನಡುವೆ ಮೇಲ್ಸೇತುವೆ ನಿರ್ಮಾಣ ಯೋಜನೆ ವಿರೋಧಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ಉದಾಸೀನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಕಳೆದ ಜನವರಿ ೬ರಂದು ಕಾವೇರಿ ನದಿ ಕಲುಷಿತವಾಗುತ್ತಿದ್ದು, ಕಾವೇರಿ ನದಿಯಲ್ಲಿ ಕೊಳಚೆ ನೀರು ಸೇರ್ಡೆಯಾಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಆಗ ನ್ಯಾಯಪೀಠ, ಕಾವೇರಿ ನೀರು ಶುದ್ಧೀಕರಣ ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಸಲ್ಲಿಸುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಸೂಚನೆ ನೀಡಿತ್ತು.
ಈ ಕಾರ್ಯಯೋಜನೆಯಲ್ಲಿ ಹಲವು ಇಲಾಖೆಗಳ ಅಭಿಯಂತರರು ಕೆಲಸ ಮಾಡುತ್ತಿದ್ದಾರೆ ಎಂದು ನಿಗಮ ವಾದಿಸಿತ್ತು. ಹಾಗಾದರೆ ಸರ್ಕಾರ ನದಿ ಶುದ್ದೀಕರಣ ವಿಚಾರದಲ್ಲಿ ಯಾವ ಕ್ರಮ ಕೈಗೊಂಡಿದೆ ಎಂದು ಸಮಗ್ರ ಮಾಹಿತಿ ಕೊಡಿ ಎಂದು ಆದೇಶಿಸಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 