ಮಾತುಕತೆ : ಅಜಿತ್ ಧೋವಲ್ ಭಾಗಿ
ನವದೆಹಲಿ, ಡಿ 21 ಭಾರತ-ಚೀನಾ
ಗಡಿ ಪ್ರಶ್ನೆಯ ವಿಶೇಷ ಪ್ರತಿನಿಧಿಗಳ 22 ನೇ ಸಭೆ ರಾಷ್ಟ್ರ ರಾಜಧಾನಿಯಲ್ಲಿಂದು ನಡೆಯಲಿದೆ. ಭಾರತೀಯ
ನಿಯೋಗದ ನೇತೃತ್ವವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಹಿಸಲಿದ್ದು, ವಿದೇಶಾಂಗ ಸಚಿವ
ವಾಂಗ್ ಯಿ ಚೀನಾ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಈ ವರ್ಷದ ಅಕ್ಟೋಬರ್ನಲ್ಲಿ ಮಾಮಲ್ಲಾಪುರದಲ್ಲಿ
ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವಿನ 2 ನೇ ಅನೌಪಚಾರಿಕ ಶೃಂಗಸಭೆಯ ನಂತರ ಉಭಯ
ದೇಶಗಳ ವಿಶೇಷ ಪ್ರತಿನಿಧಿಗಳ ಮೊದಲ ಸಭೆ ಇದಾಗಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು
"ಎರಡೂ ಕಡೆಯವರಿಗೆ ಸ್ವೀಕಾರಾರ್ಹ" ಗಡಿ ಸಮಸ್ಯೆಗೆ ನ್ಯಾಯಯುತ ಮತ್ತು ಸಮಂಜಸವಾದ ಪರಿಹಾರಕ್ಕಾಗಿ
ಕೆಲಸ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. “ವಿಶೇಷ ಪ್ರತಿನಿಧಿ (ಎಸ್ಆರ್) ಮಾತುಕತೆಗಳು ಮುಖ್ಯ
ಮಾತುಕತೆ ಮತ್ತು ಕಾರ್ಯತಂತ್ರದ ಸಂವಹನಗಳಿಗೆ ಪ್ರಮುಖ ವೇದಿಕೆಯಾಗಿದೆ" ಎಂದು ಚೀನಾದ ವಿದೇಶಾಂಗ
ಸಚಿವಾಲಯ ಹೇಳಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 