ನೇತಾಜಿ ಸುಭಾಷ್ ಚಂದ್ರಬೋಸ್ ಅವರ 129 ನೆಯ ಜಯಂತಿ ಆಚರಣೆ
Netaji Subhas Chandra Bose's 129th birth anniversary celebration
ಲೋಕದರ್ಶನ ವರದಿ
ಬಳ್ಳಾರಿ. 17 : ವಿದ್ಯಾರ್ಥಿ ಶಿಕ್ಷಣ ಸಂಸ್ಕೃತಿ ಸೇವಾ ಸಮಿತಿ, ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್,ಬಳ್ಳಾರಿ, ವತಿಯಿಂದ ಡಾ.ರಾಜಕುಮಾರ್ ರಸ್ತೆಯಲ್ಲಿರುವ ಪಾಂಚಜನ್ಯ ಸಭಾಂಗಣದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 129 ನೆಯ ಜಯಂತಿ ಆಚರಣೆ ಮಾಡಲಾಯಿತು.
ಮುಖ್ಯ ವಕ್ತಾರರಾದ, ನಿವೃತ್ತ ಉಪನ್ಯಾಸಕರಾದ ಎನ್. ಬಸವರಾಜ್ ರವರು ಮಾತನಾಡುತ್ತಾ ನೇತಾಜಿ ಸುಭಾಸ್ ಚಂದ್ರಬೋಸ್ ಅವರು ದೇಶದ ಸ್ವಾತಂತ್ರ ಹೋರಾಟದಲ್ಲಿ ಮಾಡಿದ ಅಪ್ರತಿಮ ಸಾಧನೆಯನ್ನು, ಇಂಡಿಯನ್ ನ್ಯಾಷನಲ್ ಆರ್ಮಿಯನ್ನು ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಡಿದ ಪರಿಣಾಮವಾಗಿ ಬ್ರಿಟಿಷರು ಭಾರತದಿಂದ ಪಲಾಯನ ಗೈದರು. ಅವರ ಸೇವೆ ಅಪಾರವಾದುದು. ಪ್ರತಿಯೊಬ್ಬ ಭಾರತೀಯನು ಅವರ ಸೇವೆಯನ್ನು ಸದಾ ಸ್ಮರಿಸಬೇಕೆಂದರು. ಮುಖ್ಯ ಅತಿಥಿಗಳಾದ ಚೆಳ್ಳಗುರ್ಕಿ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಗುರುಗಳಾದ ಎಂ.ವೇಣುಗೋಪಾಲ ರವರು ಮಾತನಾಡುತ್ತಾ ವಿಧ್ಯಾರ್ಥಿಗಳು ನನ್ನ ದೇಶ, ನನ್ನ ಜನ ಸೇವಾಕಾರ್ಯದಲ್ಲಿ ಸದಾ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ನಗರ ಅಧ್ಯಕ್ಷರಾದ ಜಗದೀಶ್ ಕನುಗೋಲು ರವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ, ಕೊನೆಗೆ ವಂದನೆ ಸಲ್ಲಿಸಿದರು. ನಾಗರಾಜರವರು ಕಾರ್ಯಕ್ರಮ ನಿರ್ವಹಿಸಿದರು. ಆರಂಭದಲ್ಲಿ ನೇತಾಜಿ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ವಿದ್ಯಾರ್ಥಿ ಶಿಕ್ಷಣ ಸಂಸ್ಕೃತಿ ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಮಾರ್ಚೇಡ್ ಮಲ್ಲಿಕಾರ್ಜುನರವರು ವೇದಿಕೆಯಲ್ಲಿದ್ದರು, ವಿಭಾಗ ಸಂಘಟನಾ ಕಾರ್ಯದರ್ಶಿಗಳು, ಅಧ್ಯಾಪಕರು, ಅ.ಭಾ.ವಿ.ಪ. ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 