ಕೊಪ್ಪಳ ಜಿಲ್ಲೆಗೆ ನೂತನ ಡಿಸಿ ಸುರೇಶ್ ಇಟ್ನಾಳ ಅಧಿಕಾರ ಸ್ವೀಕಾರ
New DC Suresh Itnal assumes charge of Koppal district
ಕೊಪ್ಪಳ 18: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ನೂತನ ಛಿಜಿಲ್ಲಾಧಿಕಾರಿಗಳಿಗೆ ಅಧಿಕಾರಿ ಹಸ್ತಾಂತರಿಸಿದರು. ನೂತನ ಜಿಲ್ಲಾಧಿಕಾರಿಗಳು ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರಿ ಸ್ವೀಕರಿಸಿದರು. ಈ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಸುರೇಶ್ ಬಿ ಈ ಇಟ್ನಾಳ್ ಅವರು ಒಬ್ಬ ಉತ್ತಮ ದಕ್ಷ ಆಡಳಿತದ ಅನುಭವ ಹೊಂದಿದ ಅಧಿಕಾರಿ ಯಾಗಿದ್ದು ಈ ಹಿಂದೆ ಅಪರ ಜಿಲ್ಲಾಧಿಕಾರಿ ಯಾಗಿ ಜಿಲ್ಲೆಯಲ್ಲಿ ಒಳ್ಳೆಯ ಕೆಲಸ ಮಾಡಿ ಜಿಲ್ಲೆಯ ಸಾಮಾನ್ಯ ಜನರ ಮತ್ತು ವಿವಿಧ ಸಂಘಟನೆಗಳ ಮೆಚ್ಚುಗೆಗೆ ಪಾತ್ರರಾಗಿದ್ದರು ಅವರೇ ಈಗ ಕೊಪ್ಪಳ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳಾಗಿ ಸರ್ಕಾರದಿಂದ ನೇಮಕಗೊಂಡು ಇಂದು ಜಿಲ್ಲೆಗೆ ಭೇಟಿ ನೀಡಿ ಅಧಿಕಾರ ಸ್ವೀಕರಿಸಿ ಕೊಂಡಿರೋದು ಸಂತಸ ಉಂಟು ಮಾಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 