ನೌಕರರ ತುಟ್ಟಿಭತ್ಯೆ ಹೆಚ್ಚಳ ಆದೇಶ ತಡೆ ಹಿಡಿದ ದೆಹಲಿ ಸರ್ಕಾರ
ನವದೆಹಲಿ, ಏ 30, ಕೊರೊನಾ ಮತ್ತು ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಆರ್ಥಿಕತೆ ಸರಿದೂಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರವು 2021 ರ ಜುಲೈ ಅಂತ್ಯದ ರವರೆಗೆ ನೌಕರರ ತುಟ್ಟಿಭತ್ಯೆ ಹೆಚ್ಚಳ ತಡೆ ಹಿಡಿಯಲು ತೀರ್ಮಾನಿಸಿದೆ.ತುಟ್ಟಿಭತ್ಯೆ ತಡೆಹಿಡಿಯುವ ವಿಚಾರದಲ್ಲಿ ಕೇಂದ್ರದ ಆದೇಶವನ್ನು ದೆಹಲಿ ಸರ್ಕಾರವು ಅನುಮೋದಿಸಿದೆ. ಇದು ದೆಹಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನ್ವಯಿಸಲಿದೆ ಎಂದು ದೆಹಲಿ ಹಣಕಾಸು ಇಲಾಖೆ ಸ್ಪಷ್ಪಪಡಿಸಿದೆ.ದೆಹಲಿ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಸುಮಾರು 2.2 ಲಕ್ಷ ನೌಕರರು ಮತ್ತು ಪಿಂಚಣಿದಾರರಿಗೆ ಇದು ಅನ್ವಯವಾಗಲಿದೆ. ಈ ನಿರ್ಧಾರದ ಮೂಲಕ ಕೇಂದ್ರ ಸರ್ಕಾರದ ನಡೆಯನ್ನೇ ಅನುಸರಿಸಲು ದೆಹಲಿ ಸರ್ಕಾರ ಮುಂದಾಗಿದೆ. ನಿನ್ನೆಯಷ್ಟೆ ಕೇರಳ ಸರ್ಕಾರ ನೌಕರರ ವೇತನ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿತ್ತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 