ಹೊಸ ಶಿಕ್ಷಣ ನೀತಿ : ಎರಡು ಲಕ್ಷಕ್ಕೂ ಅಧಿಕ ಸಲಹೆ
ನವದೆಹಲಿ, ನ 21: ಹೊಸ ಶಿಕ್ಷಣ ನೀತಿ ಎನ್ ಇ ಪಿ ಗೆ ಸಂಬಂಧಿಸಿದಂತೆ ತಜ್ಞರು ಮತ್ತು ವಿವಿಧ ಸಂಬಂಧಪಟ್ಟವರಿಂದ ಎರಡು ಲಕ್ಷಕ್ಕೂ ಹೆಚ್ಚು ಸಲಹೆಗಳು ಸ್ವೀಕೃತವಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಕಸ್ತೂರಿ ರಂಗನ್ ನೇತೃತ್ವದ ಸಮಿತಿ ನೀಡಿರುವ ವರದಿ ಸಂಬಂಧ ಸುದೋರ್ಘ ಸಮಾಲೋಚನೆ ನಡೆಸಲಾಗಿದೆ. ರಾಜ್ಯಗಳ ಶಿಕ್ಷಣ ಸಚಿವರು, ವಿವಿಧ ರಾಜ್ಯಗಳ ಸಂಸದರು, ಶಿಕ್ಷಣ ತಜ್ಞರು, ಪೋಷಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ವಿವಿಧ ಮೂಲಗಳಿಂದ ದೊರೆತ ಸಲಹೆಗಳನ್ನು ವಿಶ್ಲೇಷಿಸಿ ಹೊಸ ಶಿಕ್ಷಣ ನೀತಿಯ ಕರಡನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆದಿದೆ ಎಂದರು.
ಪ್ರಸ್ತುತ ಸಕರ್ಾರ ಅಧಿಕಾರಕ್ಕೆ ಬರುವ ಮುನ್ನವೇ ಎನ್ ಇ ಪಿ ಕಾರ್ಯ ಆರಂಭವಾಗಿತ್ತು ಎಂದು ಸಹ ಅವರು ತಿಳಿಸಿದ್ದಾರೆ.
ಸುಮಾರು 42 ಲಕ್ಷ ಶಿಕ್ಷಕರು, ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಣ ವಲಯದ ಅಧಿಕಾರಿಗಳಿಗಾಗಿ ಆಗಸ್ಟ್ 21 ರಂದು ನಿಷ್ಠತಾ ಎಂಬ ರಾಷ್ಟ್ರವ್ಯಾಪಿ ಶಿಕ್ಷಕರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಅಲ್ಲದೇ 20 ಕೇಂದ್ರೀಯ ಶಾಲೆಗಳನ್ನು ಸಹ ತೆರೆಯಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 