ಹೊಸ ಶಿಕ್ಷಣ ನೀತಿ : ಎರಡು ಲಕ್ಷಕ್ಕೂ ಅಧಿಕ ಸಲಹೆ
ನವದೆಹಲಿ, ನ 21: ಹೊಸ ಶಿಕ್ಷಣ ನೀತಿ ಎನ್ ಇ ಪಿ ಗೆ ಸಂಬಂಧಿಸಿದಂತೆ ತಜ್ಞರು ಮತ್ತು ವಿವಿಧ ಸಂಬಂಧಪಟ್ಟವರಿಂದ ಎರಡು ಲಕ್ಷಕ್ಕೂ ಹೆಚ್ಚು ಸಲಹೆಗಳು ಸ್ವೀಕೃತವಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಕಸ್ತೂರಿ ರಂಗನ್ ನೇತೃತ್ವದ ಸಮಿತಿ ನೀಡಿರುವ ವರದಿ ಸಂಬಂಧ ಸುದೋರ್ಘ ಸಮಾಲೋಚನೆ ನಡೆಸಲಾಗಿದೆ. ರಾಜ್ಯಗಳ ಶಿಕ್ಷಣ ಸಚಿವರು, ವಿವಿಧ ರಾಜ್ಯಗಳ ಸಂಸದರು, ಶಿಕ್ಷಣ ತಜ್ಞರು, ಪೋಷಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ವಿವಿಧ ಮೂಲಗಳಿಂದ ದೊರೆತ ಸಲಹೆಗಳನ್ನು ವಿಶ್ಲೇಷಿಸಿ ಹೊಸ ಶಿಕ್ಷಣ ನೀತಿಯ ಕರಡನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆದಿದೆ ಎಂದರು.
ಪ್ರಸ್ತುತ ಸಕರ್ಾರ ಅಧಿಕಾರಕ್ಕೆ ಬರುವ ಮುನ್ನವೇ ಎನ್ ಇ ಪಿ ಕಾರ್ಯ ಆರಂಭವಾಗಿತ್ತು ಎಂದು ಸಹ ಅವರು ತಿಳಿಸಿದ್ದಾರೆ.
ಸುಮಾರು 42 ಲಕ್ಷ ಶಿಕ್ಷಕರು, ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಣ ವಲಯದ ಅಧಿಕಾರಿಗಳಿಗಾಗಿ ಆಗಸ್ಟ್ 21 ರಂದು ನಿಷ್ಠತಾ ಎಂಬ ರಾಷ್ಟ್ರವ್ಯಾಪಿ ಶಿಕ್ಷಕರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಅಲ್ಲದೇ 20 ಕೇಂದ್ರೀಯ ಶಾಲೆಗಳನ್ನು ಸಹ ತೆರೆಯಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 