ಶ್ರಮಿಕ ರೈಲುಗಳಿಗೂ ಬಂತು ಹೊಸ ಮಾರ್ಗಸೂಚಿ..!!
ನವದೆಹಲಿ , ಮೇ 11, ದೇಶದ ವಿವಿಧೆಡೆ ಸಿಲುಕಿರುವ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಕ್ಕೆ ಕರೆದೊಯ್ಯಲು ರೈಲ್ವೆ ಇಲಾಖೆ ಶ್ರಮಿಕ ವಿಶೇಷ ಸೇವೆ ಒದಗಿಸಿದ್ದು, ಈ ರೈಲುಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ದೇಶದ ವಿವಿಧೆಡೆ ಸಿಲುಕಿದ್ದ ವಲಸೆ ಕಾರ್ಮಿಕರು ದುಡಿಮೆ ಇಲ್ಲದೇ, ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಸ್ಥಿತಿಯಲ್ಲಿದ್ದರು. ಈ ವಲಸೆ ಕಾರ್ಮಿಕರ ನೆರವಿಗಾಗಿ ಭಾರತೀಯ ರೈಲ್ವೆ ಇಲಾಖೆ ಉಚಿತವಾಗಿ ಶ್ರಮಿಕ ವಿಶೇಷ ರೈಲುಗಳ ವ್ಯವಸ್ಥೆ ಕಲ್ಪಿಸಿದೆ. ಈ ವೇಳೆ, ಹಲವು ನಿಯಮಗಳನ್ನು ವಿಧಿಸಲಾಗಿತ್ತು. ದೇಶದ ವಿವಿಧೆಡೆ ಸಿಲುಕಿದ್ದ ಸಾವಿರಾರು ವಲಸೆ ಕಾರ್ಮಿಕರು ತಮ್ಮ – ತಮ್ಮ ಊರುಗಳನ್ನು ತಲುಪಿದ್ದಾರೆ. ಈಗ ಕೇಂದ್ರ ಸರ್ಕಾರ ಈ ಶ್ರಮಿಕ ರೈಲುಗಳಿಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇಲ್ಲಿಯವರೆಗೆ ರೈಲು ಒಂದು ನಿಲ್ದಾಣದಿಂದ ಹೊರಟರೆ ಮತ್ತೆ ಅದು ತಲುಪಬೇಕಿದ್ದ ನಿಲ್ದಾಣದಲ್ಲಿ ಮಾತ್ರ ನಿಲುಗಡೆ ಇರುತ್ತಿತ್ತು. ಆದರೆ, ಈಗ ಮೂರು ಕಡೆ ನಿಲ್ಲಿಸಲು ಸೂಚಿಸಲಾಗಿದೆ. ಇದರೊಂದಿಗೆ ಒಂದು ಶ್ರಮಿಕ ರೈಲಿನಲ್ಲಿ ಸದ್ಯ 1200 ಮಂದಿ ಪ್ರಯಾಣಿಕರಿಗೆ ಮಾತ್ರ ಅವಕಾಶವಿತ್ತು. ಈಗ 1700 ಮಂದಿ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 