ನೂತನ ನ್ಯಾಯಾಧೀಶೆ ಪದ್ಮಾವತಿಯವರಿಗೆ ಭಾರತೀಯ ಜನತಾ ಪಾರ್ಟಿ ಮಂಡಳಿಯಿಂದ ಸನ್ಮಾನ
New Judge Padmavati felicitated by Bharatiya Janata Party board
ದಾಂಡೇಲಿ - 23 : ನೂತನವಾಗಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಪದ್ಮಾವತಿಯವರನ್ನು ಅವರ ಮನೆಗೆ ತೆರಳಿ ಸ್ಥಳೀಯ ಭಾರತೀಯ ಜನತಾ ಪಾರ್ಟಿ ಮಂಡಳದವತಿಯಿಂದ ಸೋಮವಾರ ಮುಂಜಾನೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿ.ಜೆ.ಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಹಾಗೂ ಮಾಜಿ ಶಾಸಕರಾದ ಸುನೀಲ ಹೆಗಡೆಯವರು ಮಾತನಾಡಿ ಇಂದು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಕನಸು ನನಸಾದಂತಾಗಿದೆ. ಬಡತನದಲ್ಲಿಯೇ ವಿದ್ಯಾಭ್ಯಾಸವನ್ನು ಮುಗಿಸಿ ನ್ಯಾಯಾಧೀಶೆಯಾಗಿ ಆಯ್ಕೆಯಾದ ದಾಂಡೇಲಿಯ ಪದ್ಮಾವತಿಯವರ ಸಾಧನೆ ಸಂವಿಧಾನಕ್ಕೆ ಬಲ ತುಂಬಿದಂತಾಗಿದೆ. ಎಂದು ನುಡಿದು ಬರುವ ದಿನಗಳಲ್ಲಿ ಪದ್ಮಾವತಿಯವರಿಗೆ ಹೆಚ್ಚಿನ ಶ್ರೇಯಸ್ಸು ಲಬ್ಯವಾಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ಸ್ಥಳೀಯ ಅಧ್ಯಕ್ಷರಾದ ಬುಧವಂತಗೌಡ ಪಾಟೀಲ್ ಉಪಾಧ್ಯಕ್ಷ ಗುರುಮಠಪತಿ, ಪ್ರಧಾನ ಕಾರ್ಯದರ್ಶಿ ಗೀರಿಶ್ ಟೋಸುರ್, ಮತ್ತಿತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 