ನೂತನ ನ್ಯಾಯಾಧೀಶೆ ಪದ್ಮಾವತಿಯವರಿಗೆ ಭಾರತೀಯ ಜನತಾ ಪಾರ್ಟಿ ಮಂಡಳಿಯಿಂದ ಸನ್ಮಾನ
New Judge Padmavati felicitated by Bharatiya Janata Party board
ದಾಂಡೇಲಿ - 23 : ನೂತನವಾಗಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಪದ್ಮಾವತಿಯವರನ್ನು ಅವರ ಮನೆಗೆ ತೆರಳಿ ಸ್ಥಳೀಯ ಭಾರತೀಯ ಜನತಾ ಪಾರ್ಟಿ ಮಂಡಳದವತಿಯಿಂದ ಸೋಮವಾರ ಮುಂಜಾನೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿ.ಜೆ.ಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಹಾಗೂ ಮಾಜಿ ಶಾಸಕರಾದ ಸುನೀಲ ಹೆಗಡೆಯವರು ಮಾತನಾಡಿ ಇಂದು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಕನಸು ನನಸಾದಂತಾಗಿದೆ. ಬಡತನದಲ್ಲಿಯೇ ವಿದ್ಯಾಭ್ಯಾಸವನ್ನು ಮುಗಿಸಿ ನ್ಯಾಯಾಧೀಶೆಯಾಗಿ ಆಯ್ಕೆಯಾದ ದಾಂಡೇಲಿಯ ಪದ್ಮಾವತಿಯವರ ಸಾಧನೆ ಸಂವಿಧಾನಕ್ಕೆ ಬಲ ತುಂಬಿದಂತಾಗಿದೆ. ಎಂದು ನುಡಿದು ಬರುವ ದಿನಗಳಲ್ಲಿ ಪದ್ಮಾವತಿಯವರಿಗೆ ಹೆಚ್ಚಿನ ಶ್ರೇಯಸ್ಸು ಲಬ್ಯವಾಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ಸ್ಥಳೀಯ ಅಧ್ಯಕ್ಷರಾದ ಬುಧವಂತಗೌಡ ಪಾಟೀಲ್ ಉಪಾಧ್ಯಕ್ಷ ಗುರುಮಠಪತಿ, ಪ್ರಧಾನ ಕಾರ್ಯದರ್ಶಿ ಗೀರಿಶ್ ಟೋಸುರ್, ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 