ಹೊಸ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಶೀಘ್ರ: ಚನಗೊಂಡ
New Taluk Development Struggle Committee to be formed soon: Chanagonda
ದೇವರಹಿಪ್ಪರಗಿ 01: ನೂತನ ತಾಲೂಕು ಆಗಿ ದಶಕ ಕಳೆದರೂ ಹಲವು ಇಲಾಖೆಗಳಿಗೆ ಸ್ವಂತ ಕಟ್ಟಡವಿಲ್ಲ. ಮೂಲ ಸೌಕರ್ಯಗಳ ಕೊರತೆ ಸಾಕಷ್ಟಿದೆ. ಹಲವು ಗ್ರಾಮಗಳ ಜನರು ಇಂದಿಗೂ ಸರ್ಕಾರದ ಕೆಲ ಕೆಲಸಗಳಿಗಾಗಿ ಮೂಲ ತಾಲೂಕಿಗೆ ಅಲೆದಾಡುತ್ತಿದ್ದಾರೆ. ಆಡಳಿತಾರೂಢ ಸರ್ಕಾರಗಳು ಹೊಸ ತಾಲೂಕಿನ ಸಮಸ್ಯೆಗಳಿಗೆ ಸ್ಪಂದಿಸದೆ ಮಲತಾಯಿ ಧೋರಣೆ ಅನುಸರಿಸುತ್ತಿವೆ, ಕಾರಣ ಪಕ್ಷಾತೀತವಾಗಿ ಜಾತ್ಯಾತೀತವಾಗಿ ತಾಲೂಕ ಅಭಿವೃದ್ಧಿ ಹೋರಾಟ ಸಮಿತಿ ಶೀಘ್ರದಲ್ಲಿ ರಚಿಸಲಾಗುವುದು ಎಂದು ಹಿರಿಯ ವಕೀಲರಾದ ದಾನಪ್ಪಗೌಡ ಚನಗೊಂಡ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನೂತನ ತಾಲೂಕು ಕಾನಿಪ ಪದಾಧಿಕಾರಿಗಳಿಗೆ ವಕೀಲರ ನೇತೃತ್ವದಲ್ಲಿ ಸನ್ಮಾನಿಸಿ ಮಾತನಾಡಿದ ಅವರು, ಪಟ್ಟಣದಲ್ಲಿ ಉನ್ನತ ಮಟ್ಟದ ಶಿಕ್ಷಣ ಸಂಸ್ಥೆ, ಮೂಲಸೌಕರ್ಯದ ಕೊರತೆ ಇದೆ. ಜನಸಂಖ್ಯೆಯೂ ಹೆಚ್ಚಿದೆ ತಾಲೂಕು ಕೇಂದ್ರಕ್ಕೆ ಬೇಕಾದ ಎಲ್ಲಾ ಕಚೇರಿಗಳು ಇನ್ನು ಆಗಿಲ್ಲ. ರಾಜಕೀಯ ನಾಯಕರನ್ನು ಒಳಗೊಂಡ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ರಚನೆ ಮಾಡಲಾಗುವುದು. ಈ ಕುರಿತು ತಾಲೂಕಿನ ಎಲ್ಲಾ ಸಂಘಟನೆಗಳು, ಪತ್ರಕರ್ತರು, ಜಾತ್ಯಾತೀತವಾಗಿ ಹಾಗೂ ಪಕ್ಷಾತೀತವಾಗಿ ಸ್ವಾರ್ಥ ರಹಿತ ಹೋರಾಟಕ್ಕೆ ಸ್ಪಂದಿಸುವ ನೂತನ ಸಮಿತಿಗೆ ಶೀಘ್ರದಲ್ಲಿ ಪೂರ್ವಭಾವಿ ಸಭೆ ಕರೆಯಲಾಗುವುದು.
ನಮ್ಮೆಲ್ಲರ ಹೋರಾಟಕ್ಕೆ ತಾಲೂಕಿನ ಪತ್ರಕರ್ತರು ಸ್ಪಂದಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿದ ಪತ್ರಿಕಾರಂಗವು ಸಮಾಜದಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಲು ನೂತನ ತಾಲೂಕು ಅಭಿವೃದ್ಧಿ ಹೊಂದಲು ತಮ್ಮೆಲ್ಲರ ಸಹಾಯ, ಸಹಕಾರ ಹಾಗೂ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದು ಹೇಳಿದರು. ನ್ಯಾಯವಾದಿ ಎಸ್.ಬಿ. ಪಾಟೀಲ ನಿರೂಪಿಸಿದರು. ಕಾನಿಪ ನೂತನ ಪದಾಧಿಕಾರಿಗಳಿಗೆ ಹಿರಿಯ ವಕೀಲರಿಂದ ಅಭಿನಂದಿಸಿ, ಸನ್ಮಾನಿಸಲಾಯಿತು. ನ್ಯಾಯವಾದಿಗಳಾದ ಬಸವರಾಜ ಮಲ್ಲಾರಿ, ಎಸ್.ಕೆ. ಸಜ್ಜನ, ಮಲ್ಲು ಪಡಗಾನೂರ, ಕಾಶಿನಾಥ ಚವ್ಹಾಣ, ರವಿ ನಾಯಕ ಸೇರಿದಂತೆ ವಕೀಲರು ಹಾಗೂ ರೈತ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 