ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿವಿಯ ನೂತನ ಕುಲಪತಿ ನೇಮಕ

ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿವಿಯ ನೂತನ ಕುಲಪತಿ ನೇಮಕ New Vice-Chancellor appointed for Mahatma Gandhi Rural Development University

ಲೋಕದರ್ಶನ ವರದಿ 

 ಗದಗ  09:  ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ   ತಾವರಚಂದ್ ಗೆಹ್ಲೋಟ್ ಅವರು ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗದ ಕುಲಪತಿಯಾಗಿ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರನ್ನು ನೇಮಕಗೊಳಿಸಿದ್ದು, ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು, ಈ ನೇಮಕವನ್ನು ತಮ್ಮ ಜೀವನದ ಅತ್ಯುನ್ನತ ಗೌರವ ಹಾಗೂ ಮಹತ್ತರ ಜವಾಬ್ದಾರಿಯೆಂದು ಬಣ್ಣಿಸಿದರು. ಈ ಮಹತ್ತರ ಹೊಣೆಗಾರಿಕೆಯನ್ನು ವಹಿಸುವ ಅವಕಾಶ ಕಲ್ಪಿಸಿದ ಗೌರವಾನ್ವಿತ ರಾಜ್ಯಪಾಲರು ಹಾಗೂ ಕರ್ನಾಟಕ ಸರ್ಕಾರಕ್ಕೆ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.  

ಈ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಸಚಿವರಾಗಿ ಹಾಗೂ ಪ್ರಭಾರ ಕುಲಪತಿಯಾಗಿ ಸೇವೆ ಸಲ್ಲಿಸಿರುವ ಅನುಭವದಿಂದ ವಿಶ್ವವಿದ್ಯಾಲಯದ ಧ್ಯೇಯ, ದೃಷ್ಟಿಕೋನ, ಮೌಲ್ಯಗಳು ಹಾಗೂ ಭವಿಷ್ಯದ ಆಶಯಗಳ ಬಗ್ಗೆ ಅವರಿಗೆ ಆಳವಾದ ಅರಿವು ಮತ್ತು ಬದ್ಧತೆ ಇದೆ. ವಿಶ್ವವಿದ್ಯಾಲಯವನ್ನು ಶೈಕ್ಷಣಿಕ ಶ್ರೇಷ್ಠತೆ, ಗುಣಮಟ್ಟದ ಸಂಶೋಧನೆ, ನವೋದ್ಯಮ, ವಿಸ್ತರಣಾ ಚಟುವಟಿಕೆಗಳು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಆದರ್ಶ ಸಂಸ್ಥೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲಾ ಹಿತಾಸಕ್ತಿಪಕ್ಷಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದರು.

ತಮ್ಮ ಜೀವನ ಪಯಣದಲ್ಲಿ ಮಾರ್ಗದರ್ಶನ, ಪ್ರೋತ್ಸಾಹ ಹಾಗೂ ಆಶೀರ್ವಾದ ನೀಡಿದ ಗುರುಗಳು, ಹಿರಿಯರು, ಕುಟುಂಬದ ಸದಸ್ಯರು, ಸ್ನೇಹಿತರು, ಸಹೋದ್ಯೋಗಿಗಳು ಹಾಗೂ ಹಿತೈಷಿಗಳಿಗೆ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಂದೆಯೂ ಅವರ ಆಶೀರ್ವಾದ ಮತ್ತು ಸಹಕಾರದೊಂದಿಗೆ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮನ್ನು ಸಂಪೂರ್ಣವಾಗಿ ಸಮರ​‍್ಿಸಿಕೊಳ್ಳುವುದಾಗಿ ತಿಳಿಸಿದರು.