ಹೊಸ ಕಲಾವಿದರಿಗೆ ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ: ಚಲನಚಿತ್ರ ಸಾಹಿತಿ ಡಾ,ಎಂ.ಮಲ್ಲನಗೌಡ್ರ
New artists need audience encouragement: Film writer Dr. M. Mallanagoudra
ಕೊಪ್ಪಳ 02: ಕನ್ನಡ ಚಲನಚಿತ್ರ ಕ್ಷೇತ್ರದಲ್ಲಿ ಹೊಸ ಹೊಸ ಕಲಾವಿದರು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸುತ್ತಿದ್ದಾರೆ ಅವರ ಕಲೆ ಪ್ರತಿಭೆಗಳಿಗೆ ಪ್ರೇಕ್ಷಕರಾದ ನಾವುಗಳು ಪ್ರೋತ್ಸಾಹಿಸಬೇಕು ಪ್ರೇಕ್ಷಕರ ಸಹಕಾರ ಮತ್ತು ಪ್ರೋತ್ಸಾಹ ಅಗತ್ಯವಾಗಿದೆ ಎಂದು ಕೊಪ್ಪಳದ ಚಲನಚಿತ್ರ ಸಾಹಿತಿ ನಿರ್ಮಾಪಕ ಡಾ, ಎಂ.ಮಲ್ಲನಗೌಡ್ರು ಹೇಳಿದರು.
ಅವರು ಶುಕ್ರವಾರ ನಗರದ ಶಾರದಾ ಚಿತ್ರಮಂದಿರದಲ್ಲಿ ತೆರೆ ಗೊಂಡಿರುವ ಫೈಜು ಮತ್ತು ಹುಂಜ ಎಂಬ ಕನ್ನಡ ಚಲನಚಿತ್ರ ಪ್ರದರ್ಶನದ ವೇಳೆ ಪಾಲ್ಗೊಂಡು ಹೊಸ ಚಿತ್ರಗಳಿಗೆ ಹೊಸ ಕಲಾವಿದರಿಗೆ ಪ್ರೋತ್ಸಾಹಿಸಬೇಕು ಎಂದು ಅವರು ಶುಭ ಕೋರಿದರು, ಉತ್ತರ ಕರ್ನಾಟಕ ಭಾಗದ ಚಲನಚಿತ್ರ ನಿರ್ಮಾಪಕ ನಿರ್ದೇಶಕ ಕೊಪ್ಪಳದ ಬಸವರಾಜ್ ಕೊಪ್ಪಳ ರವರು ಕನ್ನಡ ಚಿತ್ರ ಗಳಲ್ಲಿರುವ ಉತ್ತಮ ಸಂದೇಶ ನಾವು ಅಳವಡಿಸಿಕೊಳ್ಳಬೇಕು ಉತ್ತಮ ಸಂದೇಶ ಸಾರುವ ಚಿತ್ರಗಳಿಗೆ ಪ್ರೇಕ್ಷಕರು ಚಿತ್ರ ನೋಡುವುದರ ಮೂಲಕ ಪ್ರೋತ್ಸಾಹಿಸಬೇಕು ಎಂದರು,
ಈ ಸಂದರ್ಭದಲ್ಲಿ ಚಿತ್ರಮಂದಿರದ ವ್ಯವಸ್ಥಾಪಕ ಶಿವು ಅಗಡಿ ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 