ಗೃಹಲಕ್ಷ್ಮಿಯಿಂದ ಹೊಸ ಸಂಘಗಳು: ಎಸ್ ಎಚ್ ಜಿ ನಿಷ್ಕ್ರಿಯವಾಗುವ ಭಯ
New associations from Grihalakshmi: Fear of SHG becoming inactive
ಕಾರವಾರ 26: ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ಪಡೆಯುವವರಿಂದ ಹೊಸ ಸಂಘಗಳ ರಚಿಸಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಮುಂದಾಗಿದ್ದು, ಈ ಕಾರ್ಯಕ್ರಮ ದಿಂದ ಎಸ್ ಎಚ್ ಜಿ ನಿಷ್ಕ್ರಿಯವಾಗುವ ಭಯವ್ಯಕ್ತವಾಗಿದೆ.
ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಬಂದ ಎನ್ ಆರ್ ಎಲ್ ಎಮ್ ಅಡಿಯ ಸೆಲ್ಪ ಹೆಲ್ಪ ಗ್ರೂಪ್ ನ ಮಹಿಳಾ ಪ್ರತಿನಿಧಿಗಳು ಮತ್ತು ಪದಾಧಿಕಾರಿಗಳು ಜಿಲ್ಲಾ ರಂಗಮಂದಿರದಿಂದ ಜಿಲ್ಲಾಧಿಕಾರಿ ಕಚೇರಿತನಕ ಮೆರವಣಿಗೆ ಮಾಡಿ, ತಮ್ಮ ಬೇಡಿಕೆಯ ಮನವಿಯನ್ನು ಅಪರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿಗೆ ಅರ್ಿಸಿದರು.
ಎಸ್ ಎಚ್ ಜಿ ಮುಖಂಡೆ ಜ್ಯೋತಿ ದೇವಳಿ ಮಾತನಾಡಿ ಈಗಾಗಲೇ ಎನ್ ಆರ್ ಎಲ್ ಎಮ್ ಅಡಿ ರಚಿತ ಸಂಘಗಳು ಶೇ.9 ರಲ್ಲಿ ಸಾಲ ಪಡೆಯುತ್ತಿವೆ.ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ಪಡೆಯುವವರಿಂದ ಹೊಸ ಸಂಘಗಳ ರಚಿಸಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಮುಂದಾಗಿದ್ದು, ಈ ಕಾರ್ಯಕ್ರಮ ದಿಂದ ಎಸ್ ಎಚ್ ಜಿ ನಿಷ್ಕ್ರಿಯವಾಗಲಿವೆ. ಹಾಗಾಗಿ ನಮ್ಮ ಸಂಘಗಳಲ್ಲಿ ಗೃಹ ಲಕ್ಷ್ಮಿ ಸಂಘ ವೀಲೀನ ಮಾಡಿ ಅಥವಾ ನಮಗೂ ಗೃಹಲಕ್ಷ್ಮಿ ಸಂಘಗಳ ಅಡಿ ಸಾಲ ಕೊಡಿ ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟರು. ಜಿಲ್ಲೆಯ ಎಲ್ಲಾ ಸ್ವಸಹಾಯ ಸಂಘಗಳಲ್ಲಿ ಕ್ರಿಯಾಶೀಲ ಸಂಘಗಳಿಗೆ ಸಾಲ ಕೊಡಿ ಎಂದು ಅವರು ಮನವಿ ಮಾಡಿದರು.
ಮನವಿ ಪಡೆದ ಅಪರ ಜಿಲ್ಲಾಧಿಕಾರಿ ಸಾಜಿದ್ ಮಾಲ್ಲಾ ಬೇಡಿಕೆಯನ್ನು ಸರ್ಕಾರಕ್ಕೆ ಕಳಿಸುವುದಾಗಿ ಹೇಳಿದರು. ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದೀಲೀಷ್ ಮಾತನಾಡಿ ನಿಮ್ಮ ಅಹವಾಲು ಅರ್ಥವಾಗಿದೆ. ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಮಾತನಾಡುವುದಾಗಿ ತಿಳಿಸಿದರು. ಮೆರವಣಿಗೆ ಶಾಂತಿಯುತವಾಗಿತ್ತು. ಪೊಲೀಸರು ಬಂದೋಬಸ್ತ ವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 