ಅಥಣಿಯಿಂದ ಶ್ರವಣಬೆಳಗೊಳಕ್ಕೆ ನೂತನ ಬಸ್ ಸಂಚಾರ ಪ್ರಾರಂಭ
New bus service from Athani to Shravanabelagola begins
ಅಥಣಿಯಿಂದ ಶ್ರವಣಬೆಳಗೊಳಕ್ಕೆ ನೂತನ ಬಸ್ ಸಂಚಾರ ಪ್ರಾರಂಭ
ಕಾಗವಾಡ: ಇತ್ತಿಚಿಗೆ ಅಥಣಿಯಿಂದ ಜೈನ ತೀರ್ಥಕ್ಷೇತ್ರ ಶ್ರವಣಬೆಳಗೊಳಕ್ಕೆ ನೂತನ ಬಸ್ ಸಂಚಾರ ಪ್ರಾರಂಭವಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕಿನ ಮೋಳೆ ಗ್ರಾಮದ ಜೈನ ಬಾಂಧವರು ರವಿವಾರ ದಿ. 18 ರಂದು ಗ್ರಾಮಕ್ಕೆ ಆಗಮಿಸಿದ ಬಸ್ಗೆ ಪೂಜೆ ಸಲ್ಲಿಸಿ, ಚಾಲಕ ಮತ್ತು ನಿರ್ವಾಹಕರಿಗೆ ಸನ್ಮಾನಿಸಿ ಬಿಳ್ಕೋಟ್ಟರು. ಈ ವೇಳೆ ಗ್ರಾಮದ ಜೈನ ಮುಖಂಡರು ಮಾತನಾಡಿ, ಈ ಬಸ್ ಅಥಣಿಯಿಂದ ಮೋಳೆ ಮಾರ್ಗವಾಗಿ ಚಿಕ್ಕೋಡಿ, ಬೆಳಗಾವಿ, ಶಿವಮೊಗ್ಗ, ಹರಿಹರ, ಚನ್ನಪಟ್ಟಣ ಮೂಲಕ ಶ್ರವಣಬೆಳಗೊಳಕ್ಕೆ ತಲುಪಲಿದ್ದು, ಚಿಕ್ಕೋಡಿ ಉಪವಿಭಾಗದಲ್ಲಿ ಅತೀ ಹೆಚ್ಚಾಗಿ ಜೈನರಿರುವ ಕಾರಣ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಇತ್ತಿಚಿಗೆ ಶ್ರವಣಬೆಳಗೊಳಕ್ಕೆ ನೂತನ ಬಸ್ ಸಂಚಾರ ಪ್ರಾರಂಭಿಸಿದ್ದು, ಇದರಿಂದ ಈ ಭಾಗದ ಜೈನರಿಗೆ ಅನಕೂಲವಾಗಿದೆ ಎಂದರು. ಮೋಳೆ ಗ್ರಾಮದ ಜೈನ ಶ್ರಾವಕ-ಶ್ರಾವಕಿಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 