ನವದೆಹಲಿ: ಚೌಕಿದಾರ್ ಅಭಿಯಾನ, ಬಿಜೆಪಿ, ಮೋದಿಗೆ ಕೇಜ್ರಿವಾಲ್ ತಿರುಗೇಟು
ನವದೆಹಲಿ, ಮಾ, 20: ಮಕ್ಕಳಿಗೆ ಭವಿಷ್ಯದಲ್ಲಿ ಬೇರೆ ಉದ್ಯೋಗ ಸಿಗದೆ ಕಾವಲುಗಾರನ ಕೆಲಸವನ್ನೇ ಮಾಡಬೇಕು ಎಂಬ ಆಸೆ ನಿಮಗಿದ್ದಲ್ಲಿ, ಬಿಜೆಪಿ ಮತ್ತು ಮೋದಿ ಅವರಿಗೆ ಮತ ಹಾಕಿ, ಇದಕ್ಕೆ ನಮ್ಮ ತಕರಾರು ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವ್ಯಂಗವಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 'ನಾನು ಚೌಕಿಧಾರ' ಎಂದು ಅರಂಭಿಸಿರುವ ಅಭಿಯಾನಕ್ಕೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ , ನಿಮ್ಮ ಮಕ್ಕಳಿಗೆ ಕಾವಲುಗಾರನ ಕೆಲಸ ಬಿಟ್ಟು ಬೇರೆ ಯಾವ ಕೆಲಸ ಸಿಗುವುದಿಲ್ಲ ಎಂದು ನಿಮಗೆ ಖಚಿತವಾದಲ್ಲಿ, ನೀವು ಬಿಜೆಪಿ ಮತ್ತು ಮೋದಿಯವರನ್ನು ಅಪ್ಪಿಕೊಳ್ಳಬಹುದು ಎಂದು ಅವರು ಲೇವಡಿ ಮಾಡಿದ್ದಾರೆ.
ಮೋದಿ ಜಿ ಇಡೀ ದೇಶವನ್ನು ಚೌಕಿದಾರ್ ಮಾಡಲು ಹೊರಟಿದ್ದಾರೆ ನಿಮ್ಮ ಮಕ್ಕಳನ್ನು ಸಹ ಚೌಕಿದಾರ್ ಮಾಡಲು ಬಯಸಿದರೆ, ಇದು ನಿಮಗೆ ಇಷ್ಟವಾದರೆ ಮೋದಿ ಜಿಗೆ ಮತ ಚಲಾಯಿಸಿ.
'ಆದರೆ, ನಿಮ್ಮ ಮಕ್ಕಳನ್ನು ವೈದ್ಯರು , ಎಂಜಿನಿಯರ್, ವಕೀಲರನ್ನಾಗಿ ನೋಡಲು, ಉತ್ತಮ ಶಿಕ್ಷಣ ನೀಡಲು ಬಯಸಿದರೆ, ವಿದ್ಯಾವಂತ ಮತ್ತು ಪ್ರಾಮಾಣಿಕ ಜನರ ರಾಜಕೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ) ಗೆ ಮತ ಚಲಾಯಿಸಿ ಎಂದು ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ
ಇದೆ 16 ರಂದು ಮೋದಿ ಭ್ರಷ್ಟಾಚಾರದ ವಿರುದ್ಧ ದೇಶದ ಜನತೆ ಕಾವಲುಗಾರರಾಗಬೇಕು ಎಂದು ಭಾರತೀಯರನ್ನು ಒತ್ತಾಯಿಸಿ, 'ಮೇನ್ ಭಿ ಚೌಕಿದಾರ್' (ನಾನು ಕೂಡ ಕಾವಲುಗಾರನಾಗಿದ್ದೇನೆ) ಎಂಬ ಅಭಿಯಾನ ಆರಂಭಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 