ಕರ್ನಾಟಕ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
New office bearers elected for Karnataka Journalists Association
ಯಲಬುರ್ಗಾ 23 : ಕರ್ನಾಟಕ ಪತ್ರಕರ್ತರ ಸಂಘದ ಯಲಬುರ್ಗಾ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಶಿವಮೂರ್ತಿ ಇಟಗಿ , ಪ್ರಧಾನ ಕಾರ್ಯದರ್ಶಿಯಾಗಿ ಶಿವುಕುಮಾರ್ ಮ್ಯಾಗೇರಿ ಆಯ್ಕೆಯಾಗಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜಿಲ್ಲಾ ಅಧ್ಯಕ್ಷ ಶರಣಪ್ಪ ಗುಮಗೇರಿ ಅವರ ಅಧ್ಯಕ್ಷತೆಯಲ್ಲಿ ನೂತನ ತಾಲೂಕು ಅಧ್ಯಕ್ಷರು ಹಾಗೂ ಅವರ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು. ಈ ವೇಳೆ ಗೌರವ ಅಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ ಸಶರಣಪ್ಪ ಪಾಟೀಲ್, ಉಪಾಧ್ಯಕ್ಷರಾಗಿ ದೇವರಾಜ ದೊಡ್ಡಮನಿ, ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದರು. ನೂತನ ಆಯ್ಕೆಯಾದ ಸದಸ್ಯರಿಗೆ ಜಿಲ್ಲಾ ಅಧ್ಯಕ್ಷ ಶರಣಪ್ಪ ಗುಮಗೇರಿ ಅವರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಪದಾಧಿಕಾರಿಗಳಾಗಿ ಆಯ್ಕೆಯಾದ ರವಿಕುಮಾರ್ ಚಲವಾದಿ, ವೀರೇಶ ಸ್ಟಾಂಪಿನ, ಕಳಕೇಶ, ಶರಣಪ್ಪ, ಮೌನೇಶ, ದುರಗೇಶ್ ಅವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 