ನಿಧಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಎಂ .ಚಿರಂಜೀವಿ ಅವರನ್ನು ಗೌರವಿಸಿದರು
Nidhi Award-winning senior journalist M. Chiranjeevi was honored
ರಾಣಿಬೆನ್ನೂರ 14 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಪ್ರತಿ ವರ್ಷ ಕೊಡ ಮಾಡುವ ಮೂಡಣದ ನಿಧಿ ಪ್ರಶಸ್ತಿಗೆ ಈ ವರ್ಷ ಪುರಸ್ಕೃತರಾದ ಹಿರಿಯ ಪತ್ರಕರ್ತ ಎಂ .ಚಿರಂಜೀವಿ ಅವರನ್ನು ಹುಟ್ಟೂರು ತಾಲೂಕಿನ ಕೆರಿಮಲ್ಲಾಪುರದಲ್ಲಿ ಗ್ರಾಮಸ್ಥರು, ಶಿಕ್ಷಕರು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಿರಂತರ 36 ವರ್ಷಗಳ ಕಾಲ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸಿ ಇಂದು ಸನ್ಮಾನಕ್ಕೆ ಪಾತ್ರರಾಗಿದ್ದು ನಿಮ್ಮೆಲ್ಲರ ಸಹಕಾರ ಹಾಗೂ ಪ್ರೋತ್ಸಾಹವೇ ಇದಕ್ಕೆ ಕಾರಣವಾಗಿದೆ, ಗ್ರಾಮಸ್ಥರ ಈ ಋಣ ಎಂದೂ ತೀರಿಸಲಾಗದು ಎಂದರು.
ಶಿಕ್ಷಕಿ ಅನುಸೂಯಾ ರಾಠೋಡ, ರಾಷ್ಟ್ತಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಆರ್.ಎಸ್. ಪಾಟೀಲ, ಪ್ರಕಾಶ ಸೊಪ್ಪಿನ, ಎನ್.ವಿ. ಚಪ್ಪರದ, ಹಾಲೇಶ ಮುದ್ದಿ, ವೀರನಗೌಡ ಪಾಟೀಲ, ಮಂಜುನಾಥ್ ಚಿಕ್ಕಣ್ಣನವರ್, ಅಪ್ಪಣ್ಣ ಶಿವಲಿಂಗಣ್ಣನವರ, ಶ್ರೀನಿವಾಸ, ನಿಂಗರಾಜ ಮಡಿವಾಳರ, ಪಿಕೆ ಪರಂಗಿ, ನಿರ್ಮಲಾ ಲಮಾಣಿ, ಸಿಬಿ ಸಣ್ಣಮನಿ, ವಿಜಯಲಕ್ಷ್ಮಿ ಜೋಶಿ, ಸೇರಿದಂತೆ ಗ್ರಾಮದ ಮುಖಂಡರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 