ನಿಖಿಲ್ ದಂಪತಿಗೆ ಟ್ವೀಟ್ ಮೂಲಕ ಶುಭಕೋರಿದ ನವರಸ ನಾಯಕ
ಬೆಂಗಳೂರು, ಏ.17, ಶುಭ ಶುಕ್ರವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಸ್ಯಾಂಡಲ್ ವುಡ್ ಜಾಗ್ವರ್ ಖ್ಯಾತಿಯ ನಿಖಿಲ್ ಕುಮಾರ್ ಸ್ವಾಮಿ ಹಾಗೂ ರೇವತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ.ನವ ದಂಪತಿಗೆ ರಾಜಕೀಯ ಗಣ್ಯರು, ಸಿನಿರಂಗದ ಕಲಾವಿದರು, ಸೇರಿದಂತೆ ನಿಖಿಲ್ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.ಸ್ಯಾಂಡಲ್ ವುಡ್ ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಮಧುಮಕ್ಕಳಿಗೆ ಶುಭ ಕೋರಿದ್ದಾರೆ. ನಿಖಿಲ್ ಮಾಂಗಲ್ಯಧಾರಣೆ ಮಾಡುವ ಫೋಟೋ ಶೇರ್ ಮಾಡಿರುವ ಜಗ್ಗೇಶ್, "ಮದುವೆ ಸ್ವರ್ಗದಲ್ಲಿ ನಿಶ್ಚಯಿಸಿದ ದೇವರ ನಿಯಮ. ತಂದೆ-ತಾಯಿ, ತಾತ-ಅಜ್ಜಿ ಆಶೀರ್ವಾದ ಪಡೆದು ಮದುವೆ ಆಗುವುದಕ್ಕೆ ವಿಶೇಷ ಯೋಗ ಬೇಕು. ಅದು ಪಡೆದ ಅದೃಷ್ಟವಂತ ನಿಖಿಲ್. ನೀವು ನೂರ್ಕಾಲ ಸುಖವಾಗಿ ಬಾಳಿ ಎಂದು ಶುಭ ಹಾರೈಸಿದ್ದಾರೆ.ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ನಿಖಿಲ್- ರೇವತಿ ವಿವಾಹ ಇಂದು ಬಿಡದಿ ಬಳಿಯ ಕೇತುಗಾನಹಳ್ಳಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ್ ಸ್ವಾಮಿ ಅವರ ತೋಟದ ಮನೆಯಲ್ಲಿ ಸರಳವಾಗಿ ನೇರವೇರಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 