ನಿರ್ಭಯಾ ಪ್ರಕರಣ : ಕ್ಷಮಾದಾನ ಅರ್ಜಿ ತಿರಸ್ಕರಿಸಲು ಕೇಂದ್ರ ಶಿಫಾರಸ್
ನವದೆಹಲಿ, ಜನವರಿ 17, ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿದ್ದರೂ ಇದನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸ್ ಸಹ ಮಾಡಿದೆ.
ಮುಕೇಶ್ ಸಿಂಗ್ ಕೆಲ ದಿನಗಳ ಹಿಂದೆ ತನಗೆ ಕ್ಷಮಾದಾನ ನೀಡುವಂತೆ ಮನವಿ ಮಾಡಿಕೊಂಡಿದ್ದ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗುರುವಾರ ಈ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿ ಮನವಿ ತಿರಸ್ಕರಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 2012ರಲ್ಲಿ ದೆಹಲಿಯಲ್ಲಿ ಆರು ಮಂದಿ ಸೇರಿ ನಿರ್ಭಯಾ(ಹೆಸರು ಬದಲಿಸಲಾಗಿದೆ) ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆಲ ದಿನಗಳ ಜೀವನ್ಮರಣ ಹೋರಾಟದ ಬಳಿಕ ಆಕೆ ದೂರದ ಸಿಂಗಾಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಎಲ್ಲಾ 6 ಮಂದಿಯನ್ನು ಬಂಧಿಸಿದ್ದರೂ ಒಬ್ಬ ಬಾಲಾಪರಾಧಿ ಎಂಬ ಕಾರಣಕ್ಕೆ ಆತನಿಗೆ ಬಾಲಾಪರಾಧ ನಿಯಮದ ಪ್ರಕಾರ ಶಿಕ್ಷೆಯಾಗಿ ಹೊರ ಬಂದಿದ್ದಾನೆ. ರಾಮ್ ಸಿಂಗ್ ಎಂಬ ಪ್ರಮುಖ ಆರೋಪಿಯು ತಿಹಾರ್ ಜೈಲಿನಲ್ಲೇ ನೇಣಿಗೆ ಶರಣಾಗಿದ್ದ. ಉಳಿದ ನಾಲ್ವರಿಗೆ ಮರಣದಂಡನೆ ಶಿಕ್ಷೆಯಾಗಿದೆ. ಆದರೆ, ಮೇಲ್ಮನವಿ, ಕ್ಷಮಾದಾನ ಅರ್ಜಿಗಳ ಕಾರಣದಿಂದಾಗಿ ಅವರನ್ನು ಗಲ್ಲಿಗೇರಿಸುವುದು ತಡವಾಗುತ್ತಿದೆ. ದೆಹಲಿ ಹೈಕೋರ್ಟ್ ಈ ನಾಲ್ವರಿಗೆ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿ ಇದೇ 22ರಂದು ನೇಣಿಗೇರಿಸಲು ಆದೇಶ ಮಾಡಿತ್ತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 