ನಿರ್ಭಯಾ ಪ್ರಕರಣ, ಅಪರಾಧಿ ಮುಖೇಶ್ ಮನವಿ ತಿರಸ್ಕೃತ
ನವದೆಹಲಿ, ಜನವರಿ 29, ದೇಶವನ್ನೇ ನಡುಗಿಸಿದ್ದ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಮುಖೇಶ್ ಸಿಂಗ್ ಕ್ಷಮಾಧಾನ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಆರ್ ಭಾನುಮತಿ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಅಪರಾಧಿ ಮುಖೇಶ್ ಕುಮಾರ್ ಸಿಂಗ್, ರಾಷ್ಟ್ರಪತಿ ರಾಂನಾಥ್ ಕೋವಿಂದ್ ಅವರು ಕ್ಷಮಾಧಾನ ಮನವಿ ತಿರಸ್ಕರಿಸಿದ ಕ್ರಮ ಪ್ರಶ್ನಿಸಿ ಅಪರಾಧಿ ಸಿಂಗ್ ಸಲ್ಲಿಸಿದ್ದ ಮನವಿ ವಜಾ ಮಾಡಿ ಬುಧವಾರ ತೀರ್ಪು ಪ್ರಕಟಿಸಿದೆ. ಈ ಹಿಂದೆ ನಾಲ್ವರು ಅಪರಾಧಿಗಳಾದ ಅಕ್ಷಯ್ ಮತ್ತು ಮುಖೇಶ್ ಸಿಂಗ್ , ವಿನಯ್ ಶರ್ಮಾ (26) ಮತ್ತು ಪವನ್ ಗುಪ್ತಾ (26) ಅವರುಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವ ಬಗ್ಗೆ ಸಮಯ ನಿಗದಿಯಾಗಿತ್ತು. ಈಗ ಇದರ ಬಗ್ಗೆ ಇದ್ದ ಎಲ್ಲ ಅಡೆ ತಡೆಗಳು, ಕಾನೂನು ಸಮಸ್ಯೆಗಳು ನಿವಾರಣೆಯಾಗಿವೆ. ಅಪರಾಧಿಗಳು ನೇಣಿಗೆ ಕೊರಳುಕೊಡುವ ಸಮಯವೂ ಹತ್ತಿರವಾಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 