ನಿರ್ಭಯಾ ಪ್ರಕರಣ, ಅಪರಾಧಿ ಮುಖೇಶ್ ಮನವಿ ತಿರಸ್ಕೃತ
ನವದೆಹಲಿ, ಜನವರಿ 29, ದೇಶವನ್ನೇ ನಡುಗಿಸಿದ್ದ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಮುಖೇಶ್ ಸಿಂಗ್ ಕ್ಷಮಾಧಾನ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಆರ್ ಭಾನುಮತಿ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಅಪರಾಧಿ ಮುಖೇಶ್ ಕುಮಾರ್ ಸಿಂಗ್, ರಾಷ್ಟ್ರಪತಿ ರಾಂನಾಥ್ ಕೋವಿಂದ್ ಅವರು ಕ್ಷಮಾಧಾನ ಮನವಿ ತಿರಸ್ಕರಿಸಿದ ಕ್ರಮ ಪ್ರಶ್ನಿಸಿ ಅಪರಾಧಿ ಸಿಂಗ್ ಸಲ್ಲಿಸಿದ್ದ ಮನವಿ ವಜಾ ಮಾಡಿ ಬುಧವಾರ ತೀರ್ಪು ಪ್ರಕಟಿಸಿದೆ. ಈ ಹಿಂದೆ ನಾಲ್ವರು ಅಪರಾಧಿಗಳಾದ ಅಕ್ಷಯ್ ಮತ್ತು ಮುಖೇಶ್ ಸಿಂಗ್ , ವಿನಯ್ ಶರ್ಮಾ (26) ಮತ್ತು ಪವನ್ ಗುಪ್ತಾ (26) ಅವರುಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವ ಬಗ್ಗೆ ಸಮಯ ನಿಗದಿಯಾಗಿತ್ತು. ಈಗ ಇದರ ಬಗ್ಗೆ ಇದ್ದ ಎಲ್ಲ ಅಡೆ ತಡೆಗಳು, ಕಾನೂನು ಸಮಸ್ಯೆಗಳು ನಿವಾರಣೆಯಾಗಿವೆ. ಅಪರಾಧಿಗಳು ನೇಣಿಗೆ ಕೊರಳುಕೊಡುವ ಸಮಯವೂ ಹತ್ತಿರವಾಗುತ್ತಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 