ನಿರ್ಭಯಾ ಪ್ರಕರಣಗಳು ಮರುಕಳಿಸದಿರಲಿ : ಕೇಜ್ರಿವಾಲ್ ಮನವಿ
ನವದೆಹಲಿ, ಮಾ 20, ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ಮರುಕಳಿಸದಿರಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಶಿಸಿದ್ದಾರೆ.ನಿರ್ಭಯಾ ಅಪರಾಧಿಗಳಿಗೆ ಇಂದು ಬೆಳಗಿನ ಜಾವ ಗಲ್ಲುಶಿಕ್ಷೆ ಜಾರಿಯಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿರುವ ಕೇಜ್ರಿವಾಲ್, “ಭವಿಷ್ಯದಲ್ಲಿ ಯಾವುದೇ ಹೆಣ್ಣು ಮಗಳು ಇಂತಹ ಘಟನೆಗಳಿಗೆ ಸಿಲುಕದಂತೆ, ವ್ಯವಸ್ಥೆಯಲ್ಲಿನ ಲೋಪ ದೋಷ ಸರಿಪಡಿಸುವುದಾಗಿ, ಕೇಂದ್ರ, ರಾಜ್ಯ ಸರ್ಕಾರಗಳು, ಪೊಲೀಸ್, ನ್ಯಾಯಾಲಯ ಸೇರಿದಂತೆ ಪ್ರತಿಯೊಬ್ಬರೂ ಇಂದು ಪ್ರಮಾಣ ಮಾಡಬೇಕು” ಎಂದು ಹೇಳಿದ್ದಾರೆ.ಕಳೆದ 2012ರ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಕೇಶ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ರನ್ನು ಇಂದು ಬೆಳಗ್ಗೆ 5:30ಕ್ಕೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.ದೆಹಲಿಯಲ್ಲಿ 2012 ಡಿಸೆಂಬರ್ 16ರಂದು ಚಲಿಸುವ ಬಸ್ಸಿನಲ್ಲಿ ವೈದ್ಯಕೀಯೇತರ ವಿದ್ಯಾರ್ಥಿನಿ ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 