ನಿರ್ಭಯಾ ಪ್ರಕರಣಗಳು ಮರುಕಳಿಸದಿರಲಿ : ಕೇಜ್ರಿವಾಲ್ ಮನವಿ
ನವದೆಹಲಿ, ಮಾ 20, ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ಮರುಕಳಿಸದಿರಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಶಿಸಿದ್ದಾರೆ.ನಿರ್ಭಯಾ ಅಪರಾಧಿಗಳಿಗೆ ಇಂದು ಬೆಳಗಿನ ಜಾವ ಗಲ್ಲುಶಿಕ್ಷೆ ಜಾರಿಯಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿರುವ ಕೇಜ್ರಿವಾಲ್, “ಭವಿಷ್ಯದಲ್ಲಿ ಯಾವುದೇ ಹೆಣ್ಣು ಮಗಳು ಇಂತಹ ಘಟನೆಗಳಿಗೆ ಸಿಲುಕದಂತೆ, ವ್ಯವಸ್ಥೆಯಲ್ಲಿನ ಲೋಪ ದೋಷ ಸರಿಪಡಿಸುವುದಾಗಿ, ಕೇಂದ್ರ, ರಾಜ್ಯ ಸರ್ಕಾರಗಳು, ಪೊಲೀಸ್, ನ್ಯಾಯಾಲಯ ಸೇರಿದಂತೆ ಪ್ರತಿಯೊಬ್ಬರೂ ಇಂದು ಪ್ರಮಾಣ ಮಾಡಬೇಕು” ಎಂದು ಹೇಳಿದ್ದಾರೆ.ಕಳೆದ 2012ರ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಕೇಶ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ರನ್ನು ಇಂದು ಬೆಳಗ್ಗೆ 5:30ಕ್ಕೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.ದೆಹಲಿಯಲ್ಲಿ 2012 ಡಿಸೆಂಬರ್ 16ರಂದು ಚಲಿಸುವ ಬಸ್ಸಿನಲ್ಲಿ ವೈದ್ಯಕೀಯೇತರ ವಿದ್ಯಾರ್ಥಿನಿ ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 