ಆರ್ಬಿಐ ಕ್ರಮಗಳಿಂದ ಬಹು ಅಪೇಕ್ಷಿತ ಪರಿಹಾರ-ನಿರ್ಮಲಾ ಸೀತಾರಾಮನ್
ನವದೆಹಲಿ,
ಮಾರ್ಚ್ 27,ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ
ಕುಸಿತವನ್ನು ಎದುರಿಸುವ ಕ್ರಮವಾಗಿ ರೆಪೊ ದರದಲ್ಲಿ 75 ಮೂಲಾಂಕ ಕಡಿತಗೊಳಿಸುವ ರಿಸರ್ವ್
ಬ್ಯಾಂಕ್ ಪ್ರಕಟಣೆಯನ್ನು ಸ್ವಾಗತಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,
ತಿಂಗಳ ಮಾಸಿಕ ಕಂತುಗಳ ಪಾವತಿ ಮೂರು ತಿಂಗಳು ಮುಂದೂಡಿರುವುದು ಮತ್ತು ಕಾರ್ಯನಿರ್ವಹಣೆ
ಬಂಡವಾಳ ಮೇಲಿನ ಬಡ್ಡಿ ಬಹು ಅಪೇಕ್ಷಿತ ಪರಿಹಾರ ಒದಗಿಸಲಿದೆ ಎಂದು
ಪ್ರತಿಕ್ರಿಯಿಸಿದ್ದಾರೆ.
‘ಹಣಕಾಸು ಸ್ಥಿರತೆಯ ಬಗ್ಗೆ ಆರ್ಬಿಐ ಗವರ್ನರ್
ಶಕ್ತಿಕಾಂತ ದಾಸ್ ಧೈರ್ಯ ತುಂಬುವ ಮಾತುಗಳನ್ನಾಡಿರುವುದು ಶ್ಲಾಘನೀಯ. ಸಾಲಗಳ ತಿಂಗಳ
ಮಾಸಿಕ ಕಂತು (ಇಎಂಐ) ಪಾವತಿಯನ್ನು ಮೂರು ತಿಂಗಳು ಮುಂದೂಡಿರುವುದು ಮತ್ತು ಕಾರ್ಯನಿರತ
ಬಂಡವಾಳದ ಮೇಲಿನ ಬಡ್ಡಿ ಹೆಚ್ಚು ಅಪೇಕ್ಷಿತ ಪರಿಹಾರವನ್ನು ಒದಗಿಸಿಕೊಡಲಿದೆ.
ಕಡಿತಗೊಳಿಸಿದ ಬಡ್ಡಿದರ ತ್ವರಿತವಾಗಿ ವರ್ಗಾವಣೆಗೊಳ್ಳಬೇಕಾಗಿದೆ.’ ಎಂದು ಅವರು ತಮ್ಮ
ಟ್ವೀಟ್ನಲ್ಲಿ ತಿಳಿಸಿದ್ದಾರೆ. ಭಾರತೀಯ ಆರ್ಥಿಕತೆಯ ಮೂಲಾಧಾರಗಳು ಸದೃಢವಾಗಿವೆ.
2008-09ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರದ ಪರಿಸ್ಥಿತಿಗಳಿಗಿಂತ ಇದೀಗ ಭಾರತೀಯ
ಆರ್ಥಿಕತೆ ಸದೃಢವಾಗಿದೆ ಎಂಬ ಶಕ್ತಿಕಾಂತ್ ದಾಸ್ ಅವರ ಹೇಳಿಕೆಯನ್ನು ನಿರ್ಮಲಾ
ಸೀತಾರಾಮನ್ ಸ್ವಾಗತಿಸಿದ್ದಾರೆ.
ಸ್ವಚ್ಛವಾಗಿರಲು, ಸುರಕ್ಷಿತವಾಗಿರಲು ಡಿಜಿಟಲ್ ಪಾವತಿ ಮಾಡಿ ಎಂದು ದಾಸ್ ಅವರು ಸಮಯೋಚಿತ ಕಿವಿಮಾತು ಹೇಳಿರುವುದನ್ನು ಸಚಿವರು ಸ್ವಾಗತಿಸಿದ್ದಾರೆ. ಆರ್ಬಿಐ
ಗವರ್ನರ್ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿರುವ ನೀತಿ ಆಯೋಗ ಸಿಇಒ ಅಮಿತಾಭ್ ಕಾಂತ್,
ಇವು ದಿಟ್ಟ ಮತ್ತು ಮಹಾ ಕ್ರಮಗಳಾಗಿವೆ ಅವರು ಬಣ್ಣಿಸಿದ್ದಾರೆ. ಕೊವಿದ್-19
ಹಿನ್ನೆಲೆಯಲ್ಲಿ ಆರ್ಥಿಕ ಕುಸಿತ ತಡೆಯಲು ರಿಸರ್ವ್ ಬ್ಯಾಂಕ್ ಶುಕ್ರವಾರ, ಪ್ರಮುಖ
ದರಗಳಾದ ರೆಪೊ ದರ 75 ಮೂಲಾಂಕ ಮತ್ತು ರಿವರ್ಸ್ ರೆಪೋ ದರ 100 ಮೂಲಾಂಕಗಳಷ್ಟು
ಕಡಿತಗೊಳಿಸಿದೆ. ಅಲ್ಲೆ, ಬಾಕಿ ಇರುವ ಎಲ್ಲಾ ಸಾಲಗಳಿಗೆ ಮೂರು ತಿಂಗಳ ಕಾಲ ಇಎಂಐ
ಪಾವತಿಯನ್ನು ಮುಂದೂಡಲಾಗಿದೆ.ಈ ಇಳಿಕೆಯೊಂದಿಗೆ ರೆಪೊ ದರ ಶೇ 4.4 ಮತ್ತು ರಿವರ್ಸ್ ರೆಪೊ ದರ ಶೇ 4.15 ರಲ್ಲಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 