ನಿರ್ಮಲಾ ಸೀತಾರಾಮನ್ ಆರೋಪ, ಡಾ. ಮನಮೋಹನ್ ಸಿಂಗ್ ಪ್ರತಿಕ್ರಿಯೆ
ನವದೆಹಲಿ, ಅ 17: ದೇಶದ ಬ್ಯಾಂಕುಗಳ ಪ್ರಸ್ತುತ ಎದುರಿಸುತ್ತಿರುವ ದುಸ್ಥಿತಿಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮತ್ತು ಅಂದಿನ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಕಾರಣ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಡಾ. ಮನಮೋಹನ್ ಸಿಂಗ್, ಸಮಸ್ಯೆಗಳಿಗೆ ಪರಿಹಾರ ಹುಡುಕುವ ಬದಲು, ಸರ್ಕಾರ ತನ್ನ ವಿರೋಧಿಗಳ ಮೇಲೆ ಆರೋಪ ಹೊರಿಸುವಲ್ಲಿ ನಿರತವಾಗಿದೆ ಎಂದು ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಹೇಳಿಕೆಯನ್ನು ಈಗಷ್ಟೇ ಗಮನಿಸಿದ್ದೇನೆ. ಆರ್ಥಿಕತೆಯನ್ನು ಸರಿಪಡಿಸಲು ಯಾರಾದರೂ ಪ್ರಯತ್ನಿಸಿದರೆ ಮೊದಲು ಸಮಸ್ಯೆ, ಸಮಸ್ಯೆಯ ಮೂಲ ಏನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು, ವಿರೋಧ ಪಕ್ಷಗಳು ಎಲ್ಲದಕ್ಕೂ ಕಾರಣ ಎಂದು ಹೊಣೆಗಾರಿಕೆಯಿಂದ ಜಾರಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿರುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳು ದೇಶದ ಆರ್ಥಿಕತೆಯನ್ನು ಸರಿದಾರಿಗೆ ತರಲು ಯಾವುದೇ ರೀತಿಯಲ್ಲೂ ಸಹಾಯ ಮಾಡುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಅಮೆರಿಕಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಪ್ರಧಾನಿ ಡಾ. ಮನಮೋಹನ್ ಸಿಂಗ್, ರಘುರಾಮ್ ರಾಜನ್ ಆರ್ ಬಿ ಐ ಗರ್ವನರ್ ಆಗಿದ್ದಾಗ ಕೈಗೊಂಡ ಕ್ರಮಗಳು ಪ್ರಸ್ತುತ ದೇಶದ ಬ್ಯಾಂಕುಗಳು ಎದುರಿಸುತ್ತಿರುವ ಸಮಸ್ಯೆಗೆ ಕಾರಣ ಎಂದು ದೂರಿದ್ದರು. ಅವರ ಅಧಿಕಾರಾವಧಿಯಲ್ಲಿ ಕೇವಲ ದೂರವಾಣಿ ಕರೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲಗಳನ್ನು ಮಂಜೂರು ಮಾಡಲಾಗಿತ್ತು ಎಂದು ಆಕೆ ಆರೋಪಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 