ಯಾದಗಿರಿಯಲ್ಲಿ ಕೊರೋನಾ ಸೋಂಕಿನ ಪ್ರಕರಣ ದಾಖಲಾಗಿಲ್ಲ: ಜಿಲ್ಲಾಧಿಕಾರಿ
ಯಾದಗಿರಿ, ಏ.10, ಜಿಲ್ಲೆಯಲ್ಲಿ ತಬ್ಲೀಘಿ ಪ್ರಕರಣದ ಐವರು ಸೇರಿದಂತೆ ಇದುವರೆಗೂ 42 ಜನರ ಗಂಟಲು ಮಾದರಿ ಪ್ರಯೋಗಾಲಯ ವರದಿ ನೆಗಟಿವ್ ಎಂದು ಬಂದಿದ್ದು, ಗುರುವಾರ ಹೊಸದಾಗಿ 9 ಜನರ ಗಂಟಲು ಮಾದರಿಯನ್ನು ಲ್ಯಾಬ್ಗೆ ಕಳುಹಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್ ತಿಳಿಸಿದ್ದಾರೆ.ಯಾದಗಿರಿ ಜಿಲ್ಲೆಯಲ್ಲಿ ವಿದೇಶದಿಂದ ಬಂದ 71 ಜನರನ್ನು ಹೋಮ್ಕ್ವಾರಂಟೈನ್ ಮಾಡಲಾಗಿದ್ದು, ಇವರಲ್ಲಿ 46 ಜನರು 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಇವರಲ್ಲಿ ಯಾರಿಗೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 