ಯಾದಗಿರಿಯಲ್ಲಿ ಕೊರೋನಾ ಸೋಂಕಿನ ಪ್ರಕರಣ ದಾಖಲಾಗಿಲ್ಲ: ಜಿಲ್ಲಾಧಿಕಾರಿ
ಯಾದಗಿರಿ, ಏ.10, ಜಿಲ್ಲೆಯಲ್ಲಿ ತಬ್ಲೀಘಿ ಪ್ರಕರಣದ ಐವರು ಸೇರಿದಂತೆ ಇದುವರೆಗೂ 42 ಜನರ ಗಂಟಲು ಮಾದರಿ ಪ್ರಯೋಗಾಲಯ ವರದಿ ನೆಗಟಿವ್ ಎಂದು ಬಂದಿದ್ದು, ಗುರುವಾರ ಹೊಸದಾಗಿ 9 ಜನರ ಗಂಟಲು ಮಾದರಿಯನ್ನು ಲ್ಯಾಬ್ಗೆ ಕಳುಹಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್ ತಿಳಿಸಿದ್ದಾರೆ.ಯಾದಗಿರಿ ಜಿಲ್ಲೆಯಲ್ಲಿ ವಿದೇಶದಿಂದ ಬಂದ 71 ಜನರನ್ನು ಹೋಮ್ಕ್ವಾರಂಟೈನ್ ಮಾಡಲಾಗಿದ್ದು, ಇವರಲ್ಲಿ 46 ಜನರು 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಇವರಲ್ಲಿ ಯಾರಿಗೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 