ಪ್ರಯಾಣಿಕ ವಿಮಾನ ಹಾರಾಟದ ನಿರ್ಧಾರವಾಗಿಲ್ಲ : ಹರ್ ದೀಪ್ ಸಿಂಗ್ ಪುರಿ
ನವದೆಹಲಿ, ಏ 19, ಸ್ಥಳೀಯ ಅಥವಾ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ
ಪುನರಾರಂಭಿಸುವ ಕುರಿತು ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಟ್ವೀಟ್
ಮಾಡಿರುವ ಅವರು, ಸರ್ಕಾರ ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ನಿರ್ದೇಶನ ನೀಡಿದ
ಬಳಿಕವಷ್ಟೇ ವಿಮಾನಯಾನ ಸಂಸ್ಥೆಗಳು ಟಿಕೆಟ್ ಬುಕಿಂಗ್ ಆರಂಭಿಸುವಂತೆ ಸಲಹೆ
ನೀಡಿದ್ದಾರೆ.ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ವಿಮಾನ ಹಾರಾಟದ ಮೇಲೆ ನಿರ್ಬಂಧ
ಹೇರಲಾಗಿದ್ದು ಜೂನ್ 1 ರಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭಿಸುವುದಾಗಿ ಏರ್
ಇಂಡಿಯಾ ಸಂಸ್ಥೆ ಶನಿವಾರ ಹೇಳಿದ ನಂತರ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ
ಏರ್ ಇಂಡಿಯಾ ಮುಂದಿನ ತಿಂಗಳ ಅಂದರೆ ಮೇ 4 ರಿಂದ ದೇಶೀಯ ವಿಮಾನಗಳಲ್ಲಿ ಪ್ರಯಾಣಕ್ಕೆ
ಟಿಕೆಟ್ ಬುಕ್ಕಿಂಗ್ ಆರಂಭಿಸಿತ್ತು ಎಂದೂ ಹೇಳಲಾಗಿದೆ. ಇದೀಗ ಸರ್ಕಾರ ಸ್ಪಷ್ಟನೆ
ನೀಡಿದ್ದು ಮುಂದಿನ ಆದೇಶದವರೆಗೂ ಯಾವುದೇ ಪ್ರಯಾಣಿಕ ವಿಮಾನ ಹಾರಾಟಕ್ಕೆ ಅವಕಾಶವಿಲ್ಲ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 