ಪ್ರಯಾಣಿಕ ವಿಮಾನ ಹಾರಾಟದ ನಿರ್ಧಾರವಾಗಿಲ್ಲ : ಹರ್ ದೀಪ್ ಸಿಂಗ್ ಪುರಿ
ನವದೆಹಲಿ, ಏ 19, ಸ್ಥಳೀಯ ಅಥವಾ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ
ಪುನರಾರಂಭಿಸುವ ಕುರಿತು ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಟ್ವೀಟ್
ಮಾಡಿರುವ ಅವರು, ಸರ್ಕಾರ ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ನಿರ್ದೇಶನ ನೀಡಿದ
ಬಳಿಕವಷ್ಟೇ ವಿಮಾನಯಾನ ಸಂಸ್ಥೆಗಳು ಟಿಕೆಟ್ ಬುಕಿಂಗ್ ಆರಂಭಿಸುವಂತೆ ಸಲಹೆ
ನೀಡಿದ್ದಾರೆ.ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ವಿಮಾನ ಹಾರಾಟದ ಮೇಲೆ ನಿರ್ಬಂಧ
ಹೇರಲಾಗಿದ್ದು ಜೂನ್ 1 ರಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭಿಸುವುದಾಗಿ ಏರ್
ಇಂಡಿಯಾ ಸಂಸ್ಥೆ ಶನಿವಾರ ಹೇಳಿದ ನಂತರ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ
ಏರ್ ಇಂಡಿಯಾ ಮುಂದಿನ ತಿಂಗಳ ಅಂದರೆ ಮೇ 4 ರಿಂದ ದೇಶೀಯ ವಿಮಾನಗಳಲ್ಲಿ ಪ್ರಯಾಣಕ್ಕೆ
ಟಿಕೆಟ್ ಬುಕ್ಕಿಂಗ್ ಆರಂಭಿಸಿತ್ತು ಎಂದೂ ಹೇಳಲಾಗಿದೆ. ಇದೀಗ ಸರ್ಕಾರ ಸ್ಪಷ್ಟನೆ
ನೀಡಿದ್ದು ಮುಂದಿನ ಆದೇಶದವರೆಗೂ ಯಾವುದೇ ಪ್ರಯಾಣಿಕ ವಿಮಾನ ಹಾರಾಟಕ್ಕೆ ಅವಕಾಶವಿಲ್ಲ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 