ಬೆಂಗಳೂರು 28: ರಾಜ್ಯದಲ್ಲಿ ನೆಲೆಸಿರುವ ನಿವೃತ್ತ ಸೈನಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ. ಸೇನಾ ಕ್ಯಾಂಟೀನ್ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ ಸೈನಿಕರ ಅಗತ್ಯಗಳಿಗೆ, ಅವರ ಬೆಂಬಲಕ್ಕೆ ನಮ್ಮ ಸರ್ಕಾರ ಯಾವತ್ತೂ ಸಿದ್ಧವಿದೆ. ಅವರ ಕಲ್ಯಾಣಕ್ಕಾಗಿ ನಿಗಮದ ರೀತಿಯ ವ್ಯವಸ್ಥೆ ರೂಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ’ ಎಂದರು.