ಸೇವಾಲಾಲ್ ಜಯಂತಿಗೆ ಸರ್ಕಾರದಿಂದ ಅನುದಾನ ಬಂದಿಲ್ಲ : ಗವಿಸಿದ್ದಪ್ಪ ಅಸಮಾಧಾನ
No government funding for Sevalal Jayanti: Gavisiddappa unhappy
ಲೋಕದರ್ಶನ ವರದಿ
ಕಂಪ್ಲಿ:15 ಬಂಜಾರ ಸಮುದಾಯಕ್ಕೆ ಸ್ವಾಭಿಮಾನದ ಬದಕು ಜೊತೆಗೆ ಮತ್ತು ಸಾಮಾಜಿಕ ಸಮಾನತೆಯನ್ನು ಕಲಿಸಿದ ಮಹಾನ್ ಸಂತ ಸೇವಲಾಲ್ಎಂದು ಕಂದಾಯ ನೀರೀಕ್ಷಕ ಜಗದೀಶ ಹೇಳಿದರು.ಸ್ಥಳೀಯ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ಸ ಸಂತ ಸೇವಲಾಲ್ ಜಯಂತ್ಯೋತ್ಸವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಸಂತ ಶ್ರೀ ಸೇವಾಲಾಲ್ ಮಹಾರಾಜರ ತತ್ವಾದರ್ಶಗಳು ನಮ್ಮ ನಿತ್ಯದ ಬದುಕಿಗೆ ಮಾರ್ಗದರ್ಶಕಗಳಾಗಿವೆ . ಅವುಗಳನ್ನು ಅಳವಡಿಸಿಕೊಂಡು ನಮ್ಮ ಬದುಕನ್ನು ಬಂಗಾರ ಮಾಡಿಕೊಳ್ಳಬೇಕಾಗಿದೆ ಎಂದರು.ಸಹ ಶಿಕ್ಷಕ ರಾಜನಾಯ್ಕ ಮಾತನಾಡಿ, ಅಳಿವಿನ ಹಂಚಿನಲ್ಲಿರುವ ಬಂಜಾರ ಸಮುದಾಯದ ಸಂಸ್ಕೃತಿಯನ್ನು ಮೇಲೆತ್ತುವ ಕೆಲಸವಾಗಬೇಕು. ದೈವಿಕ ಶಕ್ತಿ ಜತೆಗೆ ಸಮಾಜದ ಉನ್ನತಿಗೆ ಸಂತ ಸೇವಾಲಾಲ್ ಕೊಡುಗೆ ದೊಡ್ಡದಿದೆ. ನಮ್ಮ ಸಮುದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು. ನಂತರ ಬಂಜಾರ ಸಮಾಜದ ಅಧ್ಯಕ್ಷ ಆರ್.ಕೆ.ಗವಿಸಿದ್ದಪ್ಪ ಮಾತನಾಡಿ,
ಬಂಜಾರ ಸಮುದಾಯದ ಅಭಿವೃದ್ಧಿ ವಿಶೇಷ ಯೋಜನೆಗಳನ್ನು ರೂಪಿಸುವ ಜೊತೆಗೆ ನಮ್ಮ ಸಂಸ್ಕೃತಿಯನ್ನು ನಾಡಿನುದ್ದಕ್ಕೂ ಹೆಚ್ಚಿನ ಮಟ್ಟದಲ್ಲಿ ಪಸರಿಸುವ ಮೂಲಕ ಬೆಳಕಿಗೆ ತರಬೇಕು. ಸಂತ ಸೇವಾಲಾಲ್ ಜಯಂತಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸುಗ್ಗೇನಹಳ್ಳಿ ಗ್ರಾಮ ಆಡಳಿತಾಧಿಕಾರಿ ಲಕ್ಷ್ಮಣ ನಾಯ್ಕ, ಎಪ್ ಡಿ.ಸಿ ಮಾಲತೇಶ ಸಮಾಜದ ಮುಖಂಡರಾದ ನಿಂಗಪ್ಪ ಕೆ, ಬಸವರಾಜ ಪವರ್, ಪುಂಡಲಿಕಪ್ಪ ರಾಥೋಡ್, ಲಿಂಬಪ್ಪ ರಾಥೋಡ್, ಹನುಂತಪ್ಪ ಚೌಹಾಣ್, ಗುಂಡನಾಯಕ ಚೌಹಾಣ್, ಚಂದ್ರ್ಪ, ಜ್ಯೋತಿ ಗುಂಡನಾಯ್ಕ್, ಗಂಗಾದರ, ರವಿ, ಕಾಳಪ್ಪ, ನೀಲಮ್ಮ, ಯಮನಪ್ಪ, ಭೀಮವ್ವ, ಮಲ್ಲಿಕಾರ್ಜುನ ಹಾಗೂ ಸಮಾಜದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 