ಸೇವಾಲಾಲ್ ಜಯಂತಿಗೆ ಸರ್ಕಾರದಿಂದ ಅನುದಾನ ಬಂದಿಲ್ಲ : ಗವಿಸಿದ್ದಪ್ಪ ಅಸಮಾಧಾನ
No government funding for Sevalal Jayanti: Gavisiddappa unhappy
ಲೋಕದರ್ಶನ ವರದಿ
ಕಂಪ್ಲಿ:15 ಬಂಜಾರ ಸಮುದಾಯಕ್ಕೆ ಸ್ವಾಭಿಮಾನದ ಬದಕು ಜೊತೆಗೆ ಮತ್ತು ಸಾಮಾಜಿಕ ಸಮಾನತೆಯನ್ನು ಕಲಿಸಿದ ಮಹಾನ್ ಸಂತ ಸೇವಲಾಲ್ಎಂದು ಕಂದಾಯ ನೀರೀಕ್ಷಕ ಜಗದೀಶ ಹೇಳಿದರು.ಸ್ಥಳೀಯ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ಸ ಸಂತ ಸೇವಲಾಲ್ ಜಯಂತ್ಯೋತ್ಸವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಸಂತ ಶ್ರೀ ಸೇವಾಲಾಲ್ ಮಹಾರಾಜರ ತತ್ವಾದರ್ಶಗಳು ನಮ್ಮ ನಿತ್ಯದ ಬದುಕಿಗೆ ಮಾರ್ಗದರ್ಶಕಗಳಾಗಿವೆ . ಅವುಗಳನ್ನು ಅಳವಡಿಸಿಕೊಂಡು ನಮ್ಮ ಬದುಕನ್ನು ಬಂಗಾರ ಮಾಡಿಕೊಳ್ಳಬೇಕಾಗಿದೆ ಎಂದರು.ಸಹ ಶಿಕ್ಷಕ ರಾಜನಾಯ್ಕ ಮಾತನಾಡಿ, ಅಳಿವಿನ ಹಂಚಿನಲ್ಲಿರುವ ಬಂಜಾರ ಸಮುದಾಯದ ಸಂಸ್ಕೃತಿಯನ್ನು ಮೇಲೆತ್ತುವ ಕೆಲಸವಾಗಬೇಕು. ದೈವಿಕ ಶಕ್ತಿ ಜತೆಗೆ ಸಮಾಜದ ಉನ್ನತಿಗೆ ಸಂತ ಸೇವಾಲಾಲ್ ಕೊಡುಗೆ ದೊಡ್ಡದಿದೆ. ನಮ್ಮ ಸಮುದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು. ನಂತರ ಬಂಜಾರ ಸಮಾಜದ ಅಧ್ಯಕ್ಷ ಆರ್.ಕೆ.ಗವಿಸಿದ್ದಪ್ಪ ಮಾತನಾಡಿ,
ಬಂಜಾರ ಸಮುದಾಯದ ಅಭಿವೃದ್ಧಿ ವಿಶೇಷ ಯೋಜನೆಗಳನ್ನು ರೂಪಿಸುವ ಜೊತೆಗೆ ನಮ್ಮ ಸಂಸ್ಕೃತಿಯನ್ನು ನಾಡಿನುದ್ದಕ್ಕೂ ಹೆಚ್ಚಿನ ಮಟ್ಟದಲ್ಲಿ ಪಸರಿಸುವ ಮೂಲಕ ಬೆಳಕಿಗೆ ತರಬೇಕು. ಸಂತ ಸೇವಾಲಾಲ್ ಜಯಂತಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸುಗ್ಗೇನಹಳ್ಳಿ ಗ್ರಾಮ ಆಡಳಿತಾಧಿಕಾರಿ ಲಕ್ಷ್ಮಣ ನಾಯ್ಕ, ಎಪ್ ಡಿ.ಸಿ ಮಾಲತೇಶ ಸಮಾಜದ ಮುಖಂಡರಾದ ನಿಂಗಪ್ಪ ಕೆ, ಬಸವರಾಜ ಪವರ್, ಪುಂಡಲಿಕಪ್ಪ ರಾಥೋಡ್, ಲಿಂಬಪ್ಪ ರಾಥೋಡ್, ಹನುಂತಪ್ಪ ಚೌಹಾಣ್, ಗುಂಡನಾಯಕ ಚೌಹಾಣ್, ಚಂದ್ರ್ಪ, ಜ್ಯೋತಿ ಗುಂಡನಾಯ್ಕ್, ಗಂಗಾದರ, ರವಿ, ಕಾಳಪ್ಪ, ನೀಲಮ್ಮ, ಯಮನಪ್ಪ, ಭೀಮವ್ವ, ಮಲ್ಲಿಕಾರ್ಜುನ ಹಾಗೂ ಸಮಾಜದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 