ಆಂತರಿಕ ವ್ಯವಹಾರಗಳಲ್ಲಿ ಅನ್ಯರ ಹಸ್ತಕ್ಷೇಪ ಸಹಿಸುವುದಿಲ್ಲ : ವೆಂಕಯ್ಯನಾಯ್ಡು
ಹೈದರಾಬಾದ್, ಆಗಸ್ಟ್ 31: ಭಾರತ ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಮತ್ತು ಭವಿಷ್ಯದಲ್ಲಿಯೂ ಮಾಡುವುದಿಲ್ಲ, ನೆರೆ ಹೊರೆ ರಾಷ್ಟ್ರಗಳ ಜೊತೆ ಸದಾ ಉತ್ತಮ ಸ್ನೇಹ ಸಂಬಂಧ ಬಯಸುತ್ತದೆ ಎಂದು ಉಪರಾಷ್ಟ್ರಪತಿ ಎಂ .ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.
ಅದರೆ ದೇಶದ ಆಂತರಿಕ ವ್ಯವಹಾರಗಳಲ್ಲಿ ಯಾವುದೇ ದೇಶ ಹಸ್ತಕ್ಷೇಪ ಮಾಡಿದರೆ ಸೂಕ್ತ ಉತ್ತರ ನೀಡಲಿದೆ ಜೊತೆಗೆ ಭಾರತ ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
ವಿದೇಶಾಂಗ ಸಚಿವಾಲಯ ಮತ್ತು ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ ಜಂಟಿಯಾಗಿ ಆಯೋಜಿಸಿದ್ದ ಅಡೆತಡೆಗಳ ಯುಗದಲ್ಲಿ ಆರ್ಥಿಕ ರಾಜತಾಂತ್ರಿಕತೆ ಎಂಬ ಸಮಾವೇಶದಲ್ಲಿ ಅವರು ಮಾತನಾಡಿದರು.
ಭಾರತ ಶಾಂತಿ ಪ್ರಿಯ ದೇಶ ಮತ್ತು ವಸುದೈವ ಕುಟುಂಬಕಂ (ಜಗತ್ತು ಒಂದು ಕುಟುಂಬ) ಮತ್ತು ಪ್ರತಿಯೊಬ್ಬರೂ ಸಂತೋಷವಾಗಿರಬೇಕು ಎಂಬ ತತ್ವದಲ್ಲಿ ನಂಬಿಕೆ ಇಟ್ಟಿದೆ ಎಂದು ಹೇಳಿದರು.
ಭಯೋತ್ಪಾದನೆಗೆ ಸಹಾಯ ಮಾಡಿ ತರಬೇತಿ ನೀಡುವ ನಮ್ಮ ನೆರೆಹೊರೆಯ ದೇಶ (ಪಾಕಿಸ್ತಾನವನ್ನು ಹೆಸರಿಸದೆ) ಇದು ಅವರಿಗೆ ಮಾತ್ರವಲ್ಲ ವಿಶ್ವ ಸಮುದಾಯಕ್ಕೂ ಕೆಟ್ಟದ್ದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಭಾರತ ನೆರೆಯ ರಾಷ್ಟ್ರಗಳೊಂದಿಗೆ ಸದಾಕಾಲ ಉತ್ತಮ ಸ್ನೇಹ ಸಂಬಂಧ ಬಯಸುತ್ತದೆ ಎಂದು ಉಪರಾಷ್ಟ್ರಪತಿ ಒತ್ತಿ ಹೇಳಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 