ಆಂತರಿಕ ವ್ಯವಹಾರಗಳಲ್ಲಿ ಅನ್ಯರ ಹಸ್ತಕ್ಷೇಪ ಸಹಿಸುವುದಿಲ್ಲ : ವೆಂಕಯ್ಯನಾಯ್ಡು
ಹೈದರಾಬಾದ್, ಆಗಸ್ಟ್ 31: ಭಾರತ ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಮತ್ತು ಭವಿಷ್ಯದಲ್ಲಿಯೂ ಮಾಡುವುದಿಲ್ಲ, ನೆರೆ ಹೊರೆ ರಾಷ್ಟ್ರಗಳ ಜೊತೆ ಸದಾ ಉತ್ತಮ ಸ್ನೇಹ ಸಂಬಂಧ ಬಯಸುತ್ತದೆ ಎಂದು ಉಪರಾಷ್ಟ್ರಪತಿ ಎಂ .ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.
ಅದರೆ ದೇಶದ ಆಂತರಿಕ ವ್ಯವಹಾರಗಳಲ್ಲಿ ಯಾವುದೇ ದೇಶ ಹಸ್ತಕ್ಷೇಪ ಮಾಡಿದರೆ ಸೂಕ್ತ ಉತ್ತರ ನೀಡಲಿದೆ ಜೊತೆಗೆ ಭಾರತ ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
ವಿದೇಶಾಂಗ ಸಚಿವಾಲಯ ಮತ್ತು ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ ಜಂಟಿಯಾಗಿ ಆಯೋಜಿಸಿದ್ದ ಅಡೆತಡೆಗಳ ಯುಗದಲ್ಲಿ ಆರ್ಥಿಕ ರಾಜತಾಂತ್ರಿಕತೆ ಎಂಬ ಸಮಾವೇಶದಲ್ಲಿ ಅವರು ಮಾತನಾಡಿದರು.
ಭಾರತ ಶಾಂತಿ ಪ್ರಿಯ ದೇಶ ಮತ್ತು ವಸುದೈವ ಕುಟುಂಬಕಂ (ಜಗತ್ತು ಒಂದು ಕುಟುಂಬ) ಮತ್ತು ಪ್ರತಿಯೊಬ್ಬರೂ ಸಂತೋಷವಾಗಿರಬೇಕು ಎಂಬ ತತ್ವದಲ್ಲಿ ನಂಬಿಕೆ ಇಟ್ಟಿದೆ ಎಂದು ಹೇಳಿದರು.
ಭಯೋತ್ಪಾದನೆಗೆ ಸಹಾಯ ಮಾಡಿ ತರಬೇತಿ ನೀಡುವ ನಮ್ಮ ನೆರೆಹೊರೆಯ ದೇಶ (ಪಾಕಿಸ್ತಾನವನ್ನು ಹೆಸರಿಸದೆ) ಇದು ಅವರಿಗೆ ಮಾತ್ರವಲ್ಲ ವಿಶ್ವ ಸಮುದಾಯಕ್ಕೂ ಕೆಟ್ಟದ್ದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಭಾರತ ನೆರೆಯ ರಾಷ್ಟ್ರಗಳೊಂದಿಗೆ ಸದಾಕಾಲ ಉತ್ತಮ ಸ್ನೇಹ ಸಂಬಂಧ ಬಯಸುತ್ತದೆ ಎಂದು ಉಪರಾಷ್ಟ್ರಪತಿ ಒತ್ತಿ ಹೇಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 