ವಿರೋಧ ಪಕ್ಷದ ಮುಖಂಡರಿಗೆ ಆಮಿಷವೊಡ್ಡುವ ಅಗತ್ಯವಿಲ್ಲ: ಉಮೇಶ್ ಜಾಧವ್
ಕಲುಬರುಗಿ, ಸೆಪ್ಟೆಂಬರ್ 15 ಕಾಂಗ್ರೆಸ್ ಮತ್ತು ಜೆಡಿಎಸ್ ವಿಘಟನೆಯಾಗುತ್ತಿರುವುದರಿಂದ ಅದರ ನಾಯಕರು ಬಿಜೆಪಿ ಸೇರುತ್ತಿದ್ದು, ಪಕ್ಷವು ವಿರೋಧ ಪಕ್ಷದ ಶಾಸಕರು ಅಥವಾ ಅದರ ನಾಯಕರಿಗೆ ಆಮಿಷವೊಡ್ಡಲು ಪ್ರಯತ್ನಿಸುತ್ತಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಲುಬರುಗಿ ಬಿಜೆಪಿ ಲೋಕಸಭಾ ಸದಸ್ಯ ಉಮೇಶ್ ಜಾಧವ್ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ಶಾಸಕರನ್ನು ಆಮಿಷವೊಡ್ಡಲು ಬಿಜೆಪಿ 'ಆಪರೇಷನ್ ಕಮಲ' ನಡೆಸುತ್ತಿದೆ ಎಂಬುದನ್ನು ನಿರಾಕರಿಸಿದರು. ಇದು ನಿಜವಲ್ಲ. ಆದರೆ ಇತ್ತೀಚಿನ ಬೆಳವಣಿಗೆ ಕರ್ನಾಟಕದ ಎರಡು ಪಕ್ಷಗಳ ದುರ್ಬಲತೆಯನ್ನು ತೋರಿಸುತ್ತಿದೆ ಎಂದರು.
ಕಾಂಗ್ರೆಸ್ ಮಾಜಿ ಶಾಸಕರಾದ ಜಾಧವ್ ಅವರು ಬಿಜೆಪಿಗೆ ಪಕ್ಷಾಂತರಗೊಂಡು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸೋಲಿಸಿದ್ದರು.
ರಾಷ್ಟ್ರದ ಜನರು ಪ್ರಧಾನಿ ನರೇಂದ್ರ ಮೋದಿಯನ್ನು ಬೆಂಬಲಿಸುತ್ತಿದ್ದ, ಇತರ ಪಕ್ಷದ ಮುಖಂಡರು ಸ್ವಾಭಾವಿಕವಾಗಿ ಬಿಜೆಪಿಗೆ ಸೇರಲು ಉತ್ಸುಕರಾಗಿದ್ದಾರೆ ಎಂದು ಜಾಧವ್ ಹೇಳಿದರು
ನೆರೆಯ ಮಹಾರಾಷ್ಟ್ರದಲ್ಲಿ ಹಲವಾರು ಕಾಂಗ್ರೆಸ್ ಮತ್ತು ಇತರ ಪಕ್ಷದ ನಾಯಕರು ತಮ್ಮ ಸ್ವಂತ ಇಚ್ಛೆಯಿಂದ ಬಿಜೆಪಿಗೆ ಸೇರುತ್ತಿದ್ದಾರೆ ಮತ್ತು ಇದಕ್ಕೆ ಮೋದಿ ನಾಯಕತ್ವದ ಹೊರತಾಗಿ ಬೇರೆ ಕಾರಣವಿಲ್ಲ. ಕರ್ನಾಟಕದಲ್ಲೂ ಇದೇ ರೀತಿಯ ಬೆಳವಣಿಗೆ ನಡೆಯುತ್ತಿದೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 