ಲಾಕ್ಡೌನ್ ಪ್ಯಾಕೇಜ್ನಿಂದ ಯಾರಿಗೂ ಲಾಭವಾಗಿಲ್ಲ: ಡಿ.ಕೆ.ಶಿವಕುಮಾರ್ ಟೀಕೆ
ಬೆಂಗಳೂರು, ಮೇ 26,ರಾಜ್ಯ ಸರ್ಕಾರ ಲಾಕ್ ಡೌನ್ ಸಂಕಷ್ಟ ಪರಿಹಾರಕ್ಕಾಗಿ ವಿವಿಧ ವರ್ಗಗಳಿಗೆ ಘೋಷಿಸಿರುವ ಪ್ಯಾಕೇಜ್ ಇದುವರೆಗೂ ಯಾರನ್ನೂ ತಲುಪಿಲ್ಲ. ಅಸಂಘಟಿತ ಕಾರ್ಮಿಕರು ಸೇರಿದಂತೆ ಯಾರೊಬ್ಬರಿಗೂ ನಯಾ ಪೈಸೆ ಸಿಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಲಾಕ್ ಡೌನ್ ನಿಂದ ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಅನೇಕ ವರ್ಗದ ಜನರು ಬಹಳ ಸಂಕಷ್ಟದಲ್ಲಿದ್ದಾರೆ. ಪರಿಹಾರ ಧನ ಪಡೆಯಲು ಆಟೋ ಚಾಲಕರು ಪರದಾಡುತ್ತಿದ್ದಾರೆ. ಕೆಲವು ಕಡೆ ಪರಿಹಾರ ಧನ ವಿತರಿಸಲು ಅಧಿಕಾರಿಗಳು ಲಂಚದ ಬೇಡಿಕೆ ಇಡುತ್ತಿದ್ದಾರೆ. ಪರಿಹಾರಕ್ಕೆ ಅಧಿಕಾರಿಗಳು ಅನೇಕ ದಾಖಲೆಗಳು ಕೇಳುತ್ತಿದ್ದು, ಚಾಲಕರು ಗೊಂದಲದಲ್ಲಿದ್ದು, ಅವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ ಎಂದು ಆರೋಪಿಸಿದರು.ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ದೆಹಲಿಯಿಂದ ವಿಮಾನದ ಮೂಲಕ ನಗರಕ್ಕೆ ಆಗಮಿಸಿದ್ದು, ಅವರು ಯಾವುದೇ ಪರೀಕ್ಷೆಗೆ ಒಳಗಾಗಿಲ್ಲ. ಜನಪ್ರತಿನಿಧಿಗಳು ಈ ರೀತಿ ಮಾಡಬಾರದು ಎಂದು ಹೇಳಿದರು.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 