ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತಾಡಕೂಡದು: ಬಿಎಸ್ವೈ
ಶಿವಮೊಗ್ಗ 18: ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದರೆ ಹೋರಾಟ ಮಾಡಿ ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳಬೇಕೇ ವಿನಃ ಪ್ರತ್ಯೇಕ ರಾಜ್ಯ ಕೂಗು ಸಮಸ್ಯೆಗೆ ಪರಿಹಾರವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿರುವ ಅವರು, ಪ್ರತ್ಯೇಕ ರಾಜ್ಯ ಕುರಿತು ಯಾರೂ ಮಾತನಾಡಬಾರದು. ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದರೆ, ಹೋರಾಟ ಮಾಡಿ ಕೆಲಸ ಮಾಡಿಸಿಕೊಳ್ಳಲಿ. ಉತ್ತರ ಕನರ್ಾಟಕ ಭಾಗದ ಅಭಿವೃದ್ಧಿ ಮಾಡುವಂತೆ ಆಗ್ರಹಿಸಲಿ. ಸಮಸ್ಯೆಗಳಿಗೆ ಪ್ರತ್ಯೇಕ ರಾಜ್ಯ ಕೂಗು ಪರಿಹಾರವಲ್ಲ. ಯಾವುದೇ ಪಕ್ಷವಾದರೂ ಹೀಗೆ ಹೇಳಿದರೂ ಅದು ತಪ್ಪು ಎಂದು ಹೇಳಿದ್ದಾರೆ.
ಬಳಿಕ ಕಾಂಗ್ರೆಸ್ ನಾಯಕರ ಐಫೋನ್ ಉಡುಗೊರೆ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿರುವ ಅವರು, ನಮ್ಮ ಸಂಸದರು ಉಡುಗೊರೆಗಳನ್ನು ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಸಕರ್ಾರ ರಾಜ್ಯದ ಆಂತರಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಇದರಿಂದ ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಯಲಿದೆ. ಅಲ್ಲದೆ, ಕಳೆದ ಸಕರ್ಾರದ ಅವಧಿಯ ಆಡಳಿತ ಕೂಡ ತಿಳಿಯುತ್ತದೆ ಎಂದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 