ತಮ್ಮ ಪರ ಮತ ಹಾಕುವಂತೆ ಒತ್ತಡ ಹೇರಿಲ್ಲ : ಮೇಯರ್ ಗೌತಮ್ ಕುಮಾರ್
ಬೆಂಗಳೂರು, ಅ2: ಮೇಯರ್ ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸುವಂತೆ ಯಾರ ಮೇಲೂ ಒತ್ತಡ ಹೇರಿಲ್ಲ ಎಂದು ಮಹಾಪೌರರಾದ ಗೌತಮ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಯಾರ ಪರವಾಗಿ ಮತ ಚಲಾಯಿಸಬಹುದು.
ಇಂತವರಿಗೆ ಮತದಾನ ಮಾಡಿ ಎಂದು ಒತ್ತಾಯ ಮಾಡಲು ಆಗುವುದಿಲ್ಲ ಎಂದರು. ಪ್ರಜಾಪ್ರಭುತ್ವದಲ್ಲಿ ಯಾರಿಗೂ ಒತ್ತಾಯ ಮಾಡಲು ಆಗುವುದಿಲ್ಲ. ಬಿಬಿಎಂಪಿಯಲ್ಲಿ ಈ ಹಿಂದೆ ಜೆಡಿಎಸ್ ಮೋಸ ಆಗಿದೆ. ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಬೇಸರ ಆಗಿತ್ತು. ಹೀಗಾಗಿ ಅವರು ಮತದಾನ ಮಾಡಿಲ್ಲ ಎಂದರು. ನಾವು ಬಿಬಿಎಂಪಿಯಲ್ಲಿ ಆಪರೇಷನ್ ಕಮಲ ಮಾಡಿಲ್ಲ, ಯಾರಿಗೂ ಒತ್ತಾಯವನ್ನೂ ಮಾಡಿಲ್ಲ. ಆದರೂ ಮತದಾನ ಮಾಡಿ ತಮ್ಮ ಗೆಲುವಿಗೆ ಸಹಕರಿಸಿದ್ದಾರೆ. ಪ್ರೀತಿ, ವಿಶ್ವಾಸಕ್ಕೆ ಬೆಲೆಕೊಟ್ಟು ಎಲ್ಲಾ ಸದಸ್ಯರು ಮತದಾನ ಮಾಡಿದ್ದಾರೆ. ನಾವು ಯಾರಿಗೂ ಯಾವುದೇ ಆಮಿಷ ಒಡ್ಡಿಲ್ಲ. ಬೆಂಗಳೂರು ಅಭಿವೃದ್ಧಿಯೇ ತಮ್ಮ ಗುರಿ ಎಂದು ಗೌತಮ್ ಕುಮಾರ್ ಸ್ಪಷ್ಟಪಡಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 