ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ನೋಡಲ್ ಅಧಿಕಾರಿ ಭೇಟಿ ಪರೀಶೀಲನೆ
Nodal officer visits and inspects agricultural implement sales outlets
ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ನೋಡಲ್ ಅಧಿಕಾರಿ ಭೇಟಿ ಪರೀಶೀಲನೆ
ರಾಯಬಾಗ, 01 ; ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಗುರುವಾರ ತಾಲೂಕು ನೋಡಲ್ ಅಧಿಕಾರಿ ಲೀಲಾ ಕೌಜಗೇರಿ ಭೇಟಿ ನೀಡಿ, ರಸಗೊಬ್ಬರ ದಾಸ್ತಾನವನ್ನು ಪರೀಶೀಲಿಸಿದರು.
ಬಳಿಕ ಮಾತನಾಡಿದ ಅವರು, ತಾಲೂಕಿನಲ್ಲಿ ಮುಂಗಾರಿನ ಕೃಷಿ ಚಟುವಟಿಕೆಗಳು ಚುರುಕಾಗಿದ್ದು, ಮಳಿಗೆಗಳಲ್ಲಿ ಮಾರಾಟಗಾರರಿಗೆ ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಮಾರಾಟ ಮಾಡಲು ಸೂಚಿಸಿದರು. ಭೌತಿಕ ಮತ್ತು ಪಿಒಎಸ್ ದಾಸ್ತಾನುಗಳಲ್ಲಿ ವ್ಯತ್ಯಾಸವಾಗದಂತೆ ವ್ಯವಹರಿಸಲು ನಿರ್ದೇಶಿಸಿದ ಅವರು, ರಸಗೊಬ್ಬರ ಭೌತಿಕ ದಾಸ್ತಾನು ದರವನ್ನು ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ಪ್ರದರ್ಶಿಸಲು ಆದೇಶಿಸಿದರು. ಬೆಳೆಗಳಿಗೆ ಕಡ್ಡಾಯವಾಗಿ ಸಮಗ್ರ ಪೋಷಕಾಂಶಗಳನ್ನು ಪೂರೈಸಲು ಹಾಗೂ ಅತಿಯಾದ ಸಾರಜನಕ (ಯೂರಿಯಾ) ಬಳಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ರೈತರಿಗೆ ಅರಿವು ಮೂಡಿಸಲು ಕೃಷಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಹೆಚ್ಚಿನ ದರದಲ್ಲಿ ಹಾಗೂ ಕಳಪೆ ರಸಗೊಬ್ಬರಗಳನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಮಳಿಗೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ಕೃಷಿ ಇಲಾಖೆಯಿಂದ 3 ತಂಡಗಳನ್ನು ರಚಿಸಿ, ಎಲ್ಲಾ ರಸಗೊಬ್ಬರ ಮಳಿಗೆಗಳಿಗೆ ಭೇಟಿ ದಾಸ್ತಾನು ಪರೀಶಿಲನೆ ನಡೆಸಲಾಯಿತು. ಸಹಾಯಕ ಕೃಷಿ ನಿರ್ದೆಶಕ ವಿನೋದ ಮಾವರಕರ, ಕೃಷಿ ಅಧಿಕಾರಿಗಳಾದ ರಾಜೇಂದ್ರ ದತ್ತವಾಡೆ ಹಾಗೂ ರಘುನಾಥ ಪಾಟೀಲ ಇದ್ದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 