ಖಾಲಿ ಇರುವ ನಿಗಮ., ಮಂಡಳಿಗಳಿಗೆ ನಾಮ ನಿರ್ದೇಶನ ಮಾಡಿ: ಡಾ.ಸಿದ್ಧರಾಮ ವಾಘಮಾರೆ
Nominate vacant corporation and board positions
ಬಳ್ಳಾರಿ 04: ಪಂಚ ಗ್ಯಾರಂಟಿಗಳ ಅನುಷ್ಠಾನದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಪಡೆದಿದೆ. ಕಳೆದ ಚುನಾವಣೆಯಲ್ಲಿ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತಿನಂತೆ ನಡೆದುಕೊಂಡಿದ್ದಾರೆ. ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಸುಸೂತ್ರವಾಗಿ ನಡೆದಿದೆ. ಆದರೆ ಇನ್ನೂ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮ, ಮಂಡಳಿಗಳಲ್ಲಿ ಸ್ಥಾನಗಳು ಖಾಲಿ ಇದ್ದು, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ನೇಮಿಸಿ ಇನ್ನಷ್ಟು ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷರಾದ ಡಾ.ಸಿದ್ಧರಾಮ ವಾಘಮಾರೆ ಕೆಪಿಸಿಸಿ ನಾಯಕರು ಮತ್ತು ಆಡಳಿತ ನಡೆಸುವ ಪ್ರಭೃತಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಅರಣ್ಯ, ಜೀವಿಶಾಸ್ತೊ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಪೌರಾಡಳಿತ ಸಚಿವರಾದ ರಹೀಂ ಖಾನ್, ಮಾಜಿ ಸಚಿವರಾದ ರಾಜಶೇಖರ ವಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಶಾಸಕರು ಸರ್ಕಾರಕ್ಕೆ ಈ ಕುರಿತು ಶಿಫಾರಸು ಮಾಡಿದ್ದಾರೆ.
ನಮ್ಮಂತಹ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಹಲವು ವರ್ಷಗಳಿಂದ ಪಕ್ಷಕ್ಕಾಗಿ ಅಹರ್ನಿಶಿ ದುಡಿಯುತ್ತಿದ್ದಾರೆ. ನಿಗಮ, ಮಂಡಳಿಗಳು ಮತ್ತು ಇಲಾಖೆಗಳ ಕೆಲವೊಂದು ನಾಮ ನಿರ್ದೇಶನ ಸ್ಥಾನಗಳಿಗೆ ಭರ್ತಿ ಮಾಡುವಂತೆ ಕೋರಿ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದಾರೆ. ಪಕ್ಷಕ್ಕಾಗಿ ದುಡಿದವರು ಕೆಪಿಸಿಸಿ ನಾಯಕರ ಬಳಿ ಈ ಕುರಿತು ಅಲವತ್ತುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಬಳಿಯೂ ಕೋರಿಕೊಂಡಿದ್ದಾರೆ. ಇಂದಲ್ಲ, ನಾಳೆ ತಮಗೆ ಅವಕಾಶ ಸಿಗಬಹುದು ಎಂದು ನೀರೀಕ್ಷೆ ಇಟ್ಟುಕೊಂಡಿದ್ದಾರೆ. ಸರ್ಕಾರ ರಚನೆ ಆಗಿ ಎರಡು ವರ್ಷ ಕಳೆದರೂ ಇನ್ನೂ ಖಾಲಿ ಇರುವ ಸ್ಥಾನಗಳಿಗೆ ಭರ್ತಿ ಮಾಡಿರುವುದಿಲ್ಲ. ಈ ಕಾರಣಕ್ಕಾಗಿ ಕಾರ್ಯಕರ್ತರು ಬೇಸರಿಸಿಕೊಂಡಿದ್ದಾರೆ ಎಂದರು.
ಖಾಲಿ ಉಳಿದಿರುವ ಸ್ಥಾನಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿದರೆ ಪಕ್ಷಕ್ಕಾಗಿ ದುಡಿಯಲು ಇನ್ನಷ್ಟು ಹುಮ್ಮಸ್ಸು ಬರುತ್ತದೆ. ಮುಂದಿನ ಚುನಾವಣೆ ವೇಳೆಗೆ ಪಕ್ಷವನ್ನು ಸಂಘಟಿಸಲು ಆನೆ ಬಲ ಬಂದಂತಾಗುತ್ತದೆ. ಪಕ್ಷದ ನಾಯಕರು ಮತ್ತು ಸರ್ಕಾರ ನಡೆಸುವ ಆಡಳಿತಗಾರರು ಕಾರ್ಯಕರ್ತರಿಗೆ ನಿರಾಶೆಗೊಳಿಸದೇ ಅವಕಾಶ ಮಾಡಿಕೊಡಬೇಕು. ಅಲೆಮಾರಿ ನಿಗಮದ ಅಧ್ಯಕ್ಷ ಸ್ಥಾನ ಮತ್ತು ಆಯೋಗದ ಸ್ಥಾನವೂ ಖಾಲಿ ಇವೆ. ಹಲವಾರು ನಿಗಮ, ಮಂಡಳಿಗಳು ಮತ್ತು ಇಲಾಖೆಗಳ ನಿರ್ದೇಶಕರ ಸ್ಥಾನಗಳು ಖಾಲಿ ಇದ್ದು ಸರ್ಕಾರದಿಂದ ನಾಮ ನಿರ್ದೇಶನ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 