ಸಿದ್ದನಗೌಡರ ಡಿಆರ್ಯು ಸಿಸಿ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ
Nomination of Siddangowdar as member of DRU CC Committee
ಯರಗಟ್ಟಿ 15: ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಕಾರ್ಯಕರ್ತ ಪಕ್ಷದ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಸಾಮಾಜಿಕ ಸೇವೆಯನ್ನು ಗುರುತಿಸಿ ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಸೌತ್ ವೆಸ್ಟರ್ನ್ ರೈಲ್ವೆ ವಿಭಾಗದ ಡಿಆರ್ಯು ಸಿಸಿ ಸಮಿತಿಯ ಸದಸ್ಯರನ್ನಾಗಿ ಕೇಂದ್ರ ಸರ್ಕಾರದಿಂದ ರೈಲ್ವೆ ವಿಭಾಗಕ್ಕೆ ನಾಮನಿರ್ದೇಶನ ಮಾಡಿದ್ದಾರೆ.
ಈ ವಿಭಾಗದಲ್ಲಿ ಕರ್ನಾಟಕ, ಆಂದ್ರ್ರದೇಶ, ಮಹಾರಾಷ್ಟ್ರ, ಗೋವಾ ರಾಜ್ಯದ ರೈಲ್ವೆ ಸಂಪರ್ಕ ಒಳಗೊಂಡ ವಿಭಾಗ ಇದಾಗಿದ್ದು ಈ ರಾಜ್ಯದ ಸಂಸದರು ಶಾಸಕರು ಹಾಗೂ ಸಾಮಾಜಿಕ ಕಾರ್ಯಕರ್ತರು ನಾಮನಿರ್ದೇಶನಗೊಳ್ಳುತ್ತಾರೆ. ರಾಜ್ಯದಿಂದ ಎಫ್.ಎಸ್.ಸಿದ್ದನಗೌಡರ ಜೋತೆಯಲ್ಲಿ ಆಂದ್ರ್ರದೇಶದ ಹೈದ್ರಾಬಾದ್ ಶಾಸಕ ಡಾ.ಪಾರ್ಥಸಾರಥಿ ವಾಲ್ಮೀ ಮತ್ತು ಆಂದ್ರ್ರದೇಶದ ವಿಧಾನ ಪರಿಷತ್ ಶಾಸಕ ಕೃಷ್ಣರಾಘವ ಜಯೇಂದ್ರ ಭರತ ಆಗಷ್ಟ್ 2026 ರವರೆಗೆ ನಾಮನಿರ್ದೇಶನಗೊಂಡಿದ್ದಾರೆ.
ಇವರ ಆಯ್ಕೆಯಿಂದ ಪಕ್ಷದಲ್ಲಿ ದುಡಿಯುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ
ಅವರಿಗೆ ಸ್ಥಾನ ಮಾನಕೊಟ್ಟ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರನ್ನ ಕಾರ್ಯಕರ್ತರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 