ನೂಲಿಯ ಚಂದಯ್ಯ ಹಾಗೂ ಶ್ರೀ ಕೃಷ್ಣ ಜಯಂತಿ ಪೂರ್ವ ಸಿದ್ಧತಾ ಸಭೆ
Nooliya Chandaya and Sri Krishna Jayanti Pre-Preparatory Meeting
ನೂಲಿಯ ಚಂದಯ್ಯ ಹಾಗೂ ಶ್ರೀ ಕೃಷ್ಣ ಜಯಂತಿ ಪೂರ್ವ ಸಿದ್ಧತಾ ಸಭೆ
ಬೆಳಗಾವಿ 30: ನೂಲಿಯ ಚಂದಯ್ಯ ಹಾಗೂ ಕೃಷ್ಣ ಜಯಂತಿಗಳನ್ನು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜು.30) ನಡೆದ ನೂಲಿಯ ಚಂದಯ್ಯ ಹಾಗೂ ಕೃಷ್ಣ ಜಯಂತಿಗಳ ಆಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೂಲಿಯ ಚಂದಯ್ಯ ಜಯಂತಿಯನ್ನು ಆ.9 ರಂದು ಹಾಗೂ ಕೃಷ್ಣ ಜಯಂತಿ ಆ.19 ರಂದು ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಯೋಜಿಸಲು ತಿಳಿಸಿದರು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದನ್ವಯ ಮುದ್ರಿಸಿ ಗಣ್ಯ ಮಾನ್ಯರನ್ನು ಸಮಾರಂಭಕ್ಕೆ ಸಾಕಷ್ಟು ಮುಂಚಿತವಾಗಿ ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಕೃಷ್ಣ ಹಾಗೂ ಶ್ರೀ ನೂಲಿಯ ಚಂದಯ್ಯ ಅವರ ಜೀವನ ಸಾಧನೆಗಳ ಬಗ್ಗೆ ತಿಳಿಸುವಂತಹ ನುರಿತ ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸುವಂತೆ ತಿಳಿಸಿದರು.
ನೂಲಿಯ ಚಂದಯ್ಯ ಹಾಗೂ ಕೃಷ್ಣ ಜಯಂತಿಗಳ ಮೆರವಣಿಗೆ ಕುರಿತು ಸದರಿ ಸಭೆಯಲ್ಲಿ ಚರ್ಚಿಸಲಾಯಿತು. ಮೆರವಣಿಗೆಗಳನ್ನು ಅದ್ಧೂರಿಯಾಗಿ ನಡೆಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 