ಉತ್ತರ ಕರ್ನಾಟಕ ಅಭಿವೃದ್ಧಿ: ಮರೀಚಿಕೆ
North Karnataka development: A mirage
ಹೂವಿನ ಹಡಗಲಿ 03 : ಉತ್ತರ ಕರ್ನಾಟಕದ ಅಭಿವೃದ್ಧಿಯ ಸ್ಥಿತಿಗತಿಯು ಪ್ರಸ್ತುತ ಮಿಶ್ರ ಪ್ರತಿಕ್ರಿಯೆಗಳಿಂದ ಕೂಡಿದೆ. ಒಂದು ಪ್ರದೇಶ ಮೂಲಸೌಕರ್ಯ ಮತ್ತು ತಾಂತ್ರಿಕ ಬೆಳವಣಿಗೆಯತ್ತ ದಾಪುಗಾಲು ಹಾಕುತ್ತಿದ್ದರೆ, ಮತ್ತೊಂದೆಡೆ ಪ್ರಾದೇಶಿಕ ಅಸಮಾನತೆಯ ಸವಾಲುಗಳು ಹಾಗೆಯೇ ಉಳಿದಿದ್ದು ಉತ್ತರ ಕರ್ನಾಟಕ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಹರಪನಹಳ್ಳಿ ಸರ್ಕಾರಿ ಕಾಲೇಜಿನ ಪ್ರಾಚಾರ್ಯ ಡಾ.ಕೆ.ಸತೀಶ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಇಟ್ಟಗಿ ಹೋಬಳಿ ಘಟಕ ತಾಲೂಕಿನ ಮಹಾಜನದ ಹಳ್ಳಿ ಗ್ರಾಮದ ತಿಗರಿ ಕರಿಯಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪಾಟೀಲ್ ಅನ್ನದಾನ ಗೌಡರ, ಪಾಟೀಲ್ ಚನ್ನನ ಗೌಡರ ಸ್ಮಾರಕದತ್ತಿ, ನಂದಿಹಳ್ಳಿ ಹಾಲಪ್ಪ ದತ್ತಿ, .ಎಸ್. ಮೃತ್ಯುಂಜಯಪ್ಪ ಸ್ಮಾರಕ ದತ್ತಿ, ಮುದ್ದಿ ನಿಂಗಪ್ಪ ಸ್ಮಾರಕ ದತ್ತಿ ಉಪನ್ಯಾಸದಲ್ಲಿ ’ಉತ್ತರ ಕರ್ನಾಟಕ ಅಭಿವೃದ್ಧಿಯ ಸ್ಥಿತಿಗತಿಗಳು’ ವಿಷಯ ಕುರಿತು ಮಾತನಾಡಿದರು.
ಪ್ರಸ್ತುತ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಪ್ರಮುಖ ಸ್ಥಿತಿಗತಿಗಳು ಇಂತಿವೆ:. 1.ಪ್ರಾದೇಶಿಕ ಅಸಮಾನತೆ ,2.ಕೈಗಾರಿಕೆ ಮತ್ತು ತಂತ್ರಜ್ಞಾನ, 3.ನೀರಾವರಿ ಯೋಜನೆಗಳು,4. ಮೂಲಸೌಕರ್ಯ ಮತ್ತು ರೈಲ್ವೆ, ವಿಮಾನ ನಿಲ್ದಾಣದ ಕುರಿತು ಉಪನ್ಯಾಸ ನೀಡಿದರು. ಶಾಲೆಯ ಮುಖ್ಯ ಗುರುಗಳು ಸಿ.ಗುರುಬಸವರಾಜ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಸಾಹಿತ್ಯಿಕ,ಸಾಂಸ್ಕೃತಿಕ ಒಲವನ್ನು ಬೆಳೆಸಿಕೊಳ್ಳಲು ಕರೆ ನೀಡಿದರು. ಸಾಹಿತಿ ಕಾರ್ತಿಕ ಆಚಾರ್ಯ, ಎಂ.ನಿಂಗರಾಜ ದತ್ತಿ ಉಪನ್ಯಾಸ ನೀಡಿದರು. ವಿಜ್ಞಾನ ಶಿಕ್ಷಕ ಎಂ.ಕೊಟ್ರೇಶ್ ಸ್ವಾಗತಿಸಿದರು. ವಿದ್ಯಾರ್ಥಿಗಳಿಂದ ಕವನ ವಾಚನ, ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಜರುಗಿದವು. ಅಧ್ಯಕ್ಷತೆಯನ್ನು ಇಟ್ಟಗಿ ಹೋಬಳಿ ಘಟಕದ ಅಧ್ಯಕ್ಷ ಜಿ.ಬಿ.ವಿನಯರಾಜ ಆಚಾರ್ಯ ವಹಿಸಿದ್ದರು. ಶಿಕ್ಷಕಿ ಸರ್ವಮಂಗಳ ವಂದಿಸಿದರು. ಶಿಕ್ಷಕ ಗುರುಬಸವರಾಜ ಕಾರ್ಯಕ್ರಮ ನಿರ್ವಹಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 